15 ಹೊಸ ಬಸ್ಗಳಿಗೆ ಚಾಲನೆ
ತುಮಕೂರು- ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿಂದು 15 ನೂತನ ಅಶ್ವಮೇಧ ಬಸ್ಗಳಿಗೆ ಸಚಿವರಾದ ಡಾ. ಜಿ. ಪರಮೇಶ್ವರ್ ಹಾಗೂ ಕೆ.ಎನ್. ರಾಜಣ್ಣ ಅವರು ಚಾಲನೆ ನೀಡಿದರು.
ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಹೊಸ 15 ಬಸ್ಗಳ ಸಂಚಾರಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಚಾಲನೆ ನೀಡಿದ ಬಳಿಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸರ ಎಸ್.ಆರ್. ಶ್ರೀನಿವಾಸ್ ಅವರು ನಿಲ್ದಾಣದಲ್ಲಿ ಒಂದು ಸುತ್ತು ಬಸ್ ಓಡಿಸುವ ಮೂಲಕ ಎಲ್ಲರ ಗಮನ ಸೆಳೆದರು.
ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸುವ ಮೂಲಕ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿದೆ. ಅದೇ ರೀತಿಯ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಹೊಸ ಬಸ್ಗಳನ್ನು ಸಂಚಾರಕ್ಕೆ ನಿಯೋಜಿಸಲಾಗುತ್ತಿದೆ ಎಂದು ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಇಂದು ನೂತನವಾಗಿ ಚಾಲನೆ ದೊರೆತ 15 ಅಶ್ವಮೇಧ ಬಸ್ಗಳ ಪೈಕಿ 8 ಬಸ್ಗಳನ್ನು ಬೆಂಗಳೂರು-ತುಮಕೂರು ಮಾರ್ಗಕ್ಕೆ ಹಾಗೂ 7 ಬಸ್ಗಳನ್ನು ವೇಗಧೂತ ಮಾರ್ಗದಲ್ಲಿ ಓಡಿಸಲಾಗುತ್ತದೆ ಎಂದು ಕೆಎಸ್ಸಾರ್ಟಿಸಿ ಮೂಲಗಳು ತಿಳಿಸಿ.

ಈ ಸಂದರ್ಭದಲ್ಲಿ ಸಹಕಾರ ಕೆ.ಎನ್. ರಾಜಣ್ಣ, ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್, ಶಾಸಕ ಜ್ಯೋತಿಗಣೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಅಡಿನಲ್ ಎಸ್ಪಿ ಮರಿಯಪ್ಪ, ಕೆಎಸ್ಸಾರ್ಟಿಸಿ ಬೆಂಗಳೂರು ಕೇಂದ್ರ ಕಚೇರಿಯ ವೀಣಾ ದೇಸಾಯಿ, ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್, ತಹಶೀಲ್ದಾರ್ ಸಿದ್ದೇಶ್, ಡಿವೈಎಸ್ಪಿ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.
ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್, ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಹೊಸ ಬಸ್ಸನ್ನು ಚಲಾಯಿಸಿದರು
15 ಹೊಸ ಬಸ್ಗಳಿಗೆ ಚಾಲನೆ
ತುಮಕೂರು- ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿಂದು 15 ನೂತನ ಅಶ್ವಮೇಧ ಬಸ್ಗಳಿಗೆ ಸಚಿವರಾದ ಡಾ. ಜಿ. ಪರಮೇಶ್ವರ್ ಹಾಗೂ ಕೆ.ಎನ್. ರಾಜಣ್ಣ ಅವರು ಚಾಲನೆ ನೀಡಿದರು.
ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಹೊಸ 15 ಬಸ್ಗಳ ಸಂಚಾರಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಚಾಲನೆ ನೀಡಿದ ಬಳಿಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸರ ಎಸ್.ಆರ್. ಶ್ರೀನಿವಾಸ್ ಅವರು ನಿಲ್ದಾಣದಲ್ಲಿ ಒಂದು ಸುತ್ತು ಬಸ್ ಓಡಿಸುವ ಮೂಲಕ ಎಲ್ಲರ ಗಮನ ಸೆಳೆದರು.
ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸುವ ಮೂಲಕ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿದೆ. ಅದೇ ರೀತಿಯ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಹೊಸ ಬಸ್ಗಳನ್ನು ಸಂಚಾರಕ್ಕೆ ನಿಯೋಜಿಸಲಾಗುತ್ತಿದೆ ಎಂದು ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಇಂದು ನೂತನವಾಗಿ ಚಾಲನೆ ದೊರೆತ 15 ಅಶ್ವಮೇಧ ಬಸ್ಗಳ ಪೈಕಿ 8 ಬಸ್ಗಳನ್ನು ಬೆಂಗಳೂರು-ತುಮಕೂರು ಮಾರ್ಗಕ್ಕೆ ಹಾಗೂ 7 ಬಸ್ಗಳನ್ನು ವೇಗಧೂತ ಮಾರ್ಗದಲ್ಲಿ ಓಡಿಸಲಾಗುತ್ತದೆ ಎಂದು ಕೆಎಸ್ಸಾರ್ಟಿಸಿ ಮೂಲಗಳು ತಿಳಿಸಿ.
ಈ ಸಂದರ್ಭದಲ್ಲಿ ಸಹಕಾರ ಕೆ.ಎನ್. ರಾಜಣ್ಣ, ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್, ಶಾಸಕ ಜ್ಯೋತಿಗಣೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಅಡಿನಲ್ ಎಸ್ಪಿ ಮರಿಯಪ್ಪ, ಕೆಎಸ್ಸಾರ್ಟಿಸಿ ಬೆಂಗಳೂರು ಕೇಂದ್ರ ಕಚೇರಿಯ ವೀಣಾ ದೇಸಾಯಿ, ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್, ತಹಶೀಲ್ದಾರ್ ಸಿದ್ದೇಶ್, ಡಿವೈಎಸ್ಪಿ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.