ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಿಎಂ ಸದಾನಂದಗೌಡ ವಾಗ್ದಾಳಿ
ತುಮಕೂರು: ರಾಜ್ಯಪಾಲರು ಬೆದರುಗೊಂಬೆ ಅಲ್ಲ, ಸಾಂವಿಧಾನಿಕ ಹುದ್ದೆ. ರಾಜ್ಯದ ಆಡಳಿತ ಯಂತ್ರ ದುರುಪಯೋಗವಾದಾಗ, ಸರ್ಕಾರದ ಖಜಾನೆ ಲೂಟಿಯಾದಾಗ, ಸಾರ್ವಜನಿಕ ಆಸ್ತಿಯನ್ನು ಸ್ವಾರ್ಥಕ್ಕೆ ಬಳಸಿಕೊಂಡಾಗ, ಸರ್ಕಾರ ತಪ್ಪುದಾರಿಗೆ ಇಳಿದಾಗ ರಾಜ್ಯಪಾಲರು ಕಾನೂನಾತ್ಮಕ ಕಾರ್ಯಾಚರಣೆ ಮಾಡುತ್ತಾರೆ. ನಿಮ್ಮ ಕರ್ಮಕಾಂಡವನ್ನು ಮುಚ್ಚಿಕೊಳ್ಳಲು ರಾಜ್ಯಪಾಲರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡುವುದನ್ನು ಕಾಂಗ್ರೆಸ್ ನಾಯಕರು ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಒತ್ತಾಯಿಸಿದರು.
ರಾಜ್ಯಪಾಲರ ಅವಹೇಳನ- ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

Leave a comment
Leave a comment


