ವಾಡಿ: ತಾನು ವಾಸವಿದ್ದ ವಸತಿ ಶಾಲೆಯಲ್ಲೇ ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ಕಸ್ತೂರಬಾ ವಸತಿ ಶಾಲೆಯಲ್ಲಿ ಶುಕ್ರವಾರ ಸಂಜೆ ಜರುಗಿದೆ.
ವಾಡಿ ಸಮೀಪದ ಕಡಬೂರ ಗ್ರಾಮದ 16ವರ್ಷದ ವಿದ್ಯಾರ್ಥಿನಿ ಭಾಗ್ಯಶ್ರೀ ತಂ ಸಾಬಣ್ಣ ನಾಯ್ಕೋಡಿ ಆತ್ಮಹತ್ಯೆ ಮಾಡಿಕೊಂಡಿದ್ದು ನಿಖರ ಕಾರಣ ತಿಳಿದು ಬಂದಿಲ್ಲ.

2 ವರ್ಷಗಳಿಂದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಅಭ್ಯಾಸ ಮಾಡುತ್ತಿದ್ದಳು.
ಪಲ್ಲಂಗದ ಕಬ್ಬಿಣದ ಸಲಾಕೆಗೆ ವೇಲ್ ಸುತ್ತಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಮೇಲ್ನೋಟಕ್ಕೆ ಕಂಡು ಬಂದಿದೆ.
ಶಿವರಾತ್ರಿ ಹಬ್ಬದ ರಜೆ ಹಿನ್ನೆಲೆಯಲ್ಲಿ ವಸತಿ ಶಾಲೆಯಲ್ಲಿನ ಹಲವು ವಿದ್ಯಾರ್ಥಿಗಳು ಹಾಗೂ ವಾರ್ಡನ್ ಸಹಿತ ಹಲವು ಶಿಕ್ಷಕರು ಹಾಗೂ ಸಿಬ್ಬಂದಿಗಳು ತಮ್ಮ ಗ್ರಾಮಗಳಿಗೆ ತೆರಳಿದ್ದರು.
ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ರುದನೂರು ಹಾಗೂ ಚಿತ್ತಾಪುರ ಪಿಎಸ್ಐ ಸುದರ್ಶನರೆಡ್ಡಿ ಭೇಟಿ ನೀಡಿದ್ದು ಮಾಹಿತಿ ಕಲೆ ಹಾಕುತ್ತಿದ್ದಾರೆ.