ತುಮಕೂರು- ರಾಜಧಾನಿ ಬೆಂಗಳೂರು ಮತ್ತು ಅಂತರಾಷ್ಟಿçÃಯ ವಿಮಾನ ನಿಲ್ದಾಣಕ್ಕೆ ಸಮೀಪವಿರುವ ತುಮಕೂರು ಜಿಲ್ಲೆಯಲ್ಲಿ ಸ್ಪೋರ್ಟ್ಸ್ ಹಬ್ ಸ್ಥಾಪಿಸಬೇಕೆಂದು ಎಂದು ತುಮಕೂರು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಗೌರವಾಧ್ಯಕ್ಷ ಮುರಳೀಧರ ಹಾಲಪ್ಪ ಸರ್ಕಾರಕ್ಕೆ ಮನವಿ ಮಾಡಿದರು.
ನಗರದ ಶ್ರೀದೇವಿ ಮೆಡಿಕಲ್ ಕಾಲೇಜಿನ ಮೈದಾನದಲ್ಲಿ ಭಾನುವಾರ ತುಮಕೂರು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿದ್ದ ಅಂತರ್ಜಿಲ್ಲಾ ೧೩-೧೫ ವರ್ಷದೊಳಗಿನ ಮಕ್ಕಳ ಫುಟ್ಬಾಲ್ ಕ್ರೀಡೆಗೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ದೇಶದಲ್ಲೇ ಛಾಪು ಮೂಡಿಸಿರುವಂತಹ ಕ್ರೀಡೆಗಳಾದ ಅಥ್ಲೆಟಿಕ್ಸ್, ಫುಟ್ಬಾಲ್, ವಾಲಿಬಾಲ್, ಕಬಡ್ಡಿ, ಖೋ-ಖೋ ಸೇರಿದಂತೆ ಇನ್ನಿತರೆ ಕ್ರೀಡೆಗಳಿಗೆ ಸರ್ಕಾರ ಹಾಗೂ ಪೋಷಕರ ಪ್ರೋತ್ಸಾಹ ಇತ್ತೀಚೆಗೆ ಕಡಿಮೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸರ್ಕಾರ ಇಂತಹ ಕ್ರೀಡೆಗಳಿಗೆ ಅತ್ಯಂತ ಹೆಚ್ಚಿನ ಪ್ರೋತ್ಸಾಹ ಕೊಡುವ ಅಗತ್ಯವಿದೆ. ಪೋಷಕರೂ ಸಹ ತಮ್ಮ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು, ಬರೀ ಪ್ರಶಸ್ತಿ ಗೆಲ್ಲುವುದಕ್ಕಷ್ಟೇ ಅಲ್ಲ, ಮಕ್ಕಳಲ್ಲಿ ಕ್ರೀಡೆಗಳ ಬಗ್ಗೆ ಆತ್ಮಸ್ಥೆöÊರ್ಯ ಬೆಳೆಸುವಂತಾಗುತ್ತದೆ ಎಂದರು.
ಕ್ರೀಡಾಪಟುಗಳಲ್ಲಿರುವ ಅಭ್ಯಾಸಗಳು ಮತ್ತೊಬ್ಬರಿಗೆ ಮಾದರಿಯಾಗಿರುತ್ತವೆ. ಕ್ರೀಡಾಪಟುಗಳಲ್ಲಿ ಕೆಟ್ಟ ಚಟಗಳು, ದುರಭ್ಯಾಸಗಳು ತೀರಾ ವಿರಳ, ಕ್ರೀಡೆ, ಕ್ರೀಡಾಂಗಣ, ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನವಿರುತ್ತದೆ. ಆದ್ದರಿಂದ ಕ್ರೀಡಾಪಟುಗಳ ಆದರ್ಶಗಳನ್ನು ಅಳವಡಿಸಿಕೊಂಡು ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮುವಂತೆ ಸಲಹೆ ನೀಡಿದರು.
ಕ್ರೀಡಾನೀತಿ ಜಾರಿಯಾಗಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ ಮುರಳೀಧರ ಹಾಲಪ್ಪ ಅವರು, ಕ್ರೀಡಾನೀತಿ ಜಾರಿಯಾದರೆ ಎಲ್ಲಾ ಕ್ರೀಡಾಪಟುಗಳಿಗೂ ಅನುಕೂಲವಾಗಲಿದೆ ಎಂದು ಹೇಳಿದರು.
ತುಮಕೂರು ಶೈಕ್ಷಣಿಕ ನಗರ ಜೊತೆಗೆ ಕ್ರೀಡೆಗೂ ಅಷ್ಟೇ ಒತ್ತುಕೊಟ್ಟಿದ್ದಾರೆ. ರಾಜಧಾನಿ ಬೆಂಗಳೂರಿಗೆ ಮತ್ತು ಅಂತರಾಷ್ಟಿçÃಯ ವಿಮಾನ ನಿಲ್ದಾಣಕ್ಕೆ ಸಮೀಪವಿರುವ ತುಮಕೂರು ನಗರದಲ್ಲಿ ಅಂತರಾಷ್ಟಿçÃಯ ಮಟ್ಟದ ಕ್ರೀಡೆಗಳ ಆಯೋಜನಾ ಕೇಂದ್ರವಾಗಿ ಕಾರ್ಯರೂಪಕ್ಕೆ ಬರಲು ಎಲ್ಲಾ ಅನುಕೂಲಗಳಿವೆ ಎಂದರು.
ರಾಜ್ಯದ ವಿವಿಧ ಭಾಗಗಳಿಂದ ಇಂದು ತುಮಕೂರು ನಗರಕ್ಕೆ ಆಗಮಿಸಿರುವ ಫುಟ್ ಬಾಲ್ ಕ್ರೀಡಾಪಟುಗಳು ಉತ್ತಮವಾಗಿ ಆಡಿ ಮುಂದೊAದು ದಿನ ಅಂತರಾಷ್ಟಿçÃಯ ಮಟ್ಟದಲ್ಲಿ ಗುರುತಿಸಿಕೊಳ್ಳಿ ಎಂದು ಆಶಿಸಿದರು.
ತುಮಕೂರು ಜಿಲ್ಲೆಯಲ್ಲಿ ಸ್ಪೋರ್ಟ್ಸ್ ಹಬ್ ಸ್ಥಾಪಿಸಬೇಕು

Leave a comment
Leave a comment