ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ತುಮಕೂರು(ಕ.ವಾ.) ಜು.೬: ತುಮಕೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ನಿವೇಶನ ಹೊಂದಿರುವ ವಸತಿ ರಹಿತ(ಸ್ವಂತ ಪಕ್ಕಾ ಮನೆ ಇಲ್ಲದ) ಬಡ ಜನರಿಗೆ ೨೦೨೧-೨೨ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆ ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಪಾಲಿಕೆ ಆಯುಕ್ತ ದರ್ಶನ್ ಹೆಚ್.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾನ್ಯ ೧೯೮ ಫಲಾನುಭವಿಗಳಿಗೆ ಗುರಿ ನಿಗಧಿಪಡಿಸಿದ್ದು, ಇದರಲ್ಲಿ ೧೩೪ ಫಲಾನುಭವಿಗಳು ಈಗಾಗಲೇ ಅನುಮೋದನೆಯಾಗಿದೆ. ಉಳಿಕೆ ೬೪ ವಸತಿ ರಹಿತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತುಮಕೂರು ಮಹಾನಗರಪಾಲಿಕೆ ಕಚೇರಿಯಲ್ಲಿ ನಿಗಧಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ ೩೧ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಾನಗರಪಾಲಿಕೆಯ ವಸತಿಯ ಸಿಬ್ಬಂದಿಗಳನ್ನು ಸಂಪರ್ಕಿಸಬೇಕೆAದು ಅವರು ತಿಳಿಸಿದ್ದಾರೆ.
ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Leave a comment
Leave a comment