ತುಮಕೂರು.ಏ.೧೮:ತುಮಕೂರು ಗ್ರಾಮಾಂತರ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದಾರೆ. ಹಾಗಾಗಿ ಈ ಬಾರಿ ಬಿಜೆಪಿ ೫೦ ಸಾವಿರಕ್ಕು ಅಧಿಕ ಮತಗಳಿಂದ ಗೆಲುವು ಸಾಧಿಸಲಿದೆ ಎಂದು ಮಾಜಿ ಶಾಸಕ ಹಾಗು ಬಿಜೆಪಿ ಅಭ್ಯರ್ಥಿ ಬಿ.ಸುರೇಶಗೌಡ ತಿಳಿಸಿದ್ದಾರೆ.
ತಮ್ಮ ಅಪಾರ ಬೆಂಬಲಿಗರೊAದಿಗೆ ನಗರದ ಅರ್ಧನಾರಿಶ್ವರ ದೇವಾಲಯದಿಂದ ಜಿಲ್ಲಾಧಿಕಾರಿ ಗಳ ಕಚೇರಿಯವರೆಗೆ ಮೆರವಣಿಗೆ ನಡೆಸಿ,ಉಮೇದುವಾರಿಕೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಗ್ರಾಮಾಂತರ ಜನತೆ ಹೆಬ್ಬೂರು,ಗೂಳೂರು ಏತ ನೀರಾವರಿ,ತಮ್ಮ ಗ್ರಾಮದ ಕೆರೆ ಕಟ್ಟೆಗಳಿಗೆ ಹೇಮಾವತಿ ನೀರು,ಗ್ರಾಮದ ದೇವಾಲಯಗಳ ಅಭಿವೃದ್ಧಿಗಾಗಿ ಬದಲಾವಣೆ ಬಯಸಿದ್ದು,ಅಭಿವೃದ್ಧಿ ಶೂನ್ಯ ಜೆಡಿಎಸ್ ವಿರುದ್ದವಾಗಿ ಬಿಜೆಪಿಗೆ ಮತ ಹಾಕಲಿದ್ದಾರೆ ಎಂದರು.

ಕಳೆದ ಐದು ವರ್ಷಗಳಲ್ಲಿ ಗ್ರಾಮಾಂತರ ಕ್ಷೇತ್ರ ಅಭಿವೃದ್ಧಿಯಲ್ಲಿ ೨೦ ವರ್ಷ ಹಿಂದಕ್ಕೆ ಹೋಗಿದೆ.ಐದು ನೈಯಾಪೈಸದ ಕೆಲಸ ಆಗಿಲ್ಲ. ಕಳೆದ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿ,ಜನರಿಗೆ ಮೋಸ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.