ಕಲ್ಬುರ್ಗಿ ನಗರದ ಸಾಯಿ ಮಂದಿರ್ ಬಳಿ ಕೊಲೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿ ಈರಣ್ಣ ಗೌಡ ಪೊಲೀಸ್ ಪಾಟೀಲ್ (40) ಕೊಲೆಯಾದ ವಕೀಲ…
ತಪ್ಪಿಸಿಕೊಳ್ಳಲು ಶ್ರೀ ಗಂಗಾ ವಿಹಾರ್ ಅಪಾರ್ಟ್ಮೆಂಟ್ ಒಳಗೆ ಓಡಿ ಬಂದಿರೋ ವಕೀಲ. ಹಂತಕರು ವಕೀಲನ ಬೆನ್ನು ಹತ್ತಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.
*ಈ ಕೊಲೆಗೆ ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ...*
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಆರ್ ಚೇತನ್ ಭೇಟಿ ನೀಡಿ ಪರಿಶೀಲನೆ ಮಾಡಿದರು…
ನಂತರ ಈ ಕುರಿತಂತೆ ಕಲ್ಬುರ್ಗಿ ನಗರ ಪೊಲೀಸ್ ಆಯುಕ್ತರಾದ ಆರ್. ಚೇತನ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈರಣ್ಣ ಗೌಡ ಪೊಲೀಸ್ ಪಾಟೀಲ್ ಮೂಲತ ಉದನೂರು ಗ್ರಾಮದ ನಿವಾಸಿ ಎಂಬಾತರು ಮನೆಯಿಂದ ನ್ಯಾಯಕ್ಕೆ ಹೋಗುವ ಸಂದರ್ಭದಲ್ಲಿ ಮಧ್ಯ ರಸ್ತೆಯಲ್ಲಿ ದುಷ್ಕರ್ಮಿಗಳು ಕೊಲೆ ಮಾಡಲು ಪ್ರಯತ್ನಿಸಿದಾಗ ಶ್ರೀ ಗಂಗಾ ವಿಹಾರ್ ಅಪಾರ್ಟ್ಮೆಂಟ್ ಒಳಗೆ ಈರಣ್ಣ ಗೌಡ ಅವರು ತಪ್ಪಿಸಿಕೊಳ್ಳಲು ಓಡಿ ಹೋಗುವ ಸಂದರ್ಭದಲ್ಲಿ ದುಷ್ಕರ್ಮಿಗಳು ಬೆನ್ನು ಹತ್ತಿ ಮಾರಕಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ ಹಾಗೂ ಈ ಕೊಲೆಗೆ ಸಂಬಂಧಿಸಿದಂತೆ ಇನ್ನೂ ಕೂಡ ಸೂಕ್ತ ಮಾಹಿತಿ ತಿಳಿದು ಬಂದಿಲ್ಲ ಮತ್ತು ಹೆಚ್ಚಿನ ವಿಚಾರಣೆಗಾಗಿ ನಮ್ಮ ಇಲಾಖೆಯಿಂದ ಎರಡು ವಿಶೇಷ ತಂಡ ರಚನೆ ಮಾಡಿ ಡಿವೈಎಸ್ಪಿ ನೇತೃತ್ವದಲ್ಲಿ ವಿಚಾರಣೆ ಮಾಡಲಾಗುವುದು ಎಂದು ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು..


ವರದಿ : ಶಿವಕುಮಾರ್.ಬಿ. ಬಿರಾದರ್