ಆಗಸ್ಟ್ ೨೧ರೊಳಗಾಗಿ ಹೌಸ್ ಟು ಹೌಸ್ ಸರ್ವೇ ಪೂರ್ಣಗೊಳಿಸಿತುಮಕೂರು(ಕ.ವಾ.)ಜು.೨೧: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-೨೦೨೪ಕ್ಕೆ ಸಂಬAಧಿಸಿದAತೆ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿ(ಬಿಎಲ್ಓ)ಗಳು ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ ಆಗಸ್ಟ್ ೨೧ರೊಳಗಾಗಿ ಹೌಸ್ ಟು ಹೌಸ್ ಸರ್ವೇ ಕಾರ್ಯವನ್ನು ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶ್ರೀನಿವಾಸ್ ಕೆ. ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿAದು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬAಧಿಸಿದAತೆ ಪರಿಷ್ಕರಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ವೇಳಾ ಪಟ್ಟಿಯನ್ವಯ ಆಯಾ ಬಿಎಲ್ಓಗಳು ಆಗಸ್ಟ್ ೨೧ರೊಳಗಾಗಿ ತಮ್ಮ ಮತಗಟ್ಟೆ ವ್ಯಾಪ್ತಿಯ ಮನೆ-ಮನೆಗೆ ತೆರಳಿ ಸಮೀಕ್ಷೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.ಬಿಎಲ್ಓಗಳು ತಮ್ಮ ಮತಗಟ್ಟೆ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮನೆಯಲ್ಲಿ ವಾಸವಿರುವ ಒಟ್ಟು ಜನಸಂಖ್ಯೆ, ಮತದಾರರ ಪಟ್ಟಿಗೆ ಸಂಬAಧಿಸಿದAತೆ ಹಕ್ಕು ಮತ್ತು ಆಕ್ಷೇಪಣೆ, ತಿದ್ದುಪಡಿಗಳಿಗೆ ನಮೂನೆ-೬, ೭, ೮ರಲ್ಲಿ ಅರ್ಜಿಗಳ ಸ್ವೀಕೃತಿ, ಯುವ ಮತದಾರರ ನೋಂದಣಿ, ವಿಕಲಚೇತನ ಮತದಾರರು ಹಾಗೂ ಇತರೆ ಮಾಹಿತಿಯನ್ನು ಸಂಗ್ರಹಿಸಬೇಕೆAದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಹೌಸ್ ಟು ಹೌಸ್ ಸರ್ವೇ ಕಾರ್ಯ ಕೈಗೊಳ್ಳಲು ಚುನಾವಣಾ ಆಯೋಗವು ಹೊಸದಾಗಿ ಬಿಎಲ್ಓ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದು, ಮನೆ-ಮನೆಗೆ ತೆರಳಿ ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ಬಿಎಲ್ಓಗಳು ಈ ಆ್ಯಪ್ ಮೂಲಕ ಸಾರ್ವಜನಿಕರಿಂದ ಮಾಹಿತಿಯನ್ನು ಸಂಗ್ರಹಿಸಿ ನಮೂದಿಸಬೇಕು. ಹೌಸ್ ಟು ಹೌಸ್ ಸರ್ವೇ ಕಾರ್ಯದಿಂದ ಯಾವುದೇ ಬಿಎಲ್ಓಗಳು ತಪ್ಪಿಸಿಕೊಳ್ಳದೆ ಕಡ್ಡಾಯವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಬಿಎಲ್ಓಗಳು ಸಮೀಕ್ಷೆಗಾಗಿ ಮನೆಗಳಿಗೆ ಭೇಟಿ ನೀಡಿದಾಗ ಸಾರ್ವಜನಿಕರು ನಿಖರ ಮಾಹಿತಿಯನ್ನು ನೀಡುವ ಮೂಲಕ ಸಹಕರಿಸಬೇಕು ಹಾಗೂ ತಮ್ಮ ನಿವಾಸ ವ್ಯಾಪ್ತಿಯ ಮತಗಟ್ಟೆಗಳಲ್ಲಿನ ಮತದಾರರ ಪಟ್ಟಿಗಳಲ್ಲಿ ತಮ್ಮ ಹಾಗೂ ತಮ್ಮ ಮನೆಯ ಸದಸ್ಯರ ಹೆಸರುಗಳು ನಮೂದಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಮತದಾರರ ಪಟ್ಟಿ ಸೇರ್ಪಡೆಗೆ ನಮೂನೆ-೬, ಅನಿವಾಸಿ ಭಾರತೀಯರ ಹೆಸರುಗಳ ಸೇರ್ಪಡೆಗೆ ನಮೂನೆ-೬ಎ, ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯಲ್ಲಿ ಉದ್ದೇಶಿತ ಹೆಸರಿನ ಸೇರ್ಪಡೆಗೆ ಆಕ್ಷೇಪಣೆ/ಹೆಸರು ತೆಗೆದು ಹಾಕಲು ನಮೂನೆ-೭ರಲ್ಲಿ ಮತ್ತು ಮತದಾರರ ನಿವಾಸ ಬದಲಾವಣೆ/ ಪ್ರಸ್ತುತ ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿ/ ಯಾವುದೇ ತಿದ್ದುಪಡಿ ಇಲ್ಲದೆ ಬದಲಿ ಎಪಿಕ್ ನೀಡುವಿಕೆ/ ಅಂಗವಿಕಲ ವ್ಯಕ್ತಿಯೆಂದು ಗುರುತಿಸಲು ನಮೂನೆ-೮ರಲ್ಲಿ ಮನವಿ ಮಾಡಿಕೊಳ್ಳಬಹುದಾಗಿದೆ ಎಂದು ಬಿಎಲ್ಓಗಳು ಮತದಾರರಲ್ಲಿ ಅರಿವು ಮೂಡಿಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಚುನಾವಣಾ ತಹಶೀಲ್ದಾರ್ ಗೌರಮ್ಮ, ಪಾಲಿಕೆ ವಲಯ ಆಯುಕ್ತ ನಾಗಭೂಷಣ್, ತಹಶೀಲ್ದಾರ್ ಸಿದ್ದೇಶ್, ಮತ್ತಿತರರು ಹಾಜರಿದ್ದರು.