ನೂರಾರು ಜಾತಿ,ಹತ್ತಾರು ಧರ್ಮಗಳು,ವಿವಿಧ ಆಚಾರ,ವಿಚಾರಗಳನ್ನು ಹೊಂದಿ,ವಿವಿಧೆತೆಯಲ್ಲಿ ಏಕತೆಯನ್ನು ಎತ್ತಿ ಹಿಡಿದಿರುವ ಭಾರತದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ನೆಲೆ ನಿಂತಿದೆ ಎಂದರೆ ಅದಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ ಸಂವಿಧಾನವೇ ಕಾರಣ ಎಂದು ಕೆಪಿಸಿಸಿ ವಕ್ತಾರ ಹಾಗೂ ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಅಭಿಪ್ರಾಯಪಟ್ಟಿದ್ದಾರೆ.
ನಗರದ ಟೌನ್ಹಾಲ್(ಬಿಜಿಎಸ್)ವೃತ್ತದಲ್ಲಿ ಸಮಾಜ ಕಲ್ಯಾಣ ಇಲಾಖೆ,ವಾರ್ತಾಮತ್ತು ಪ್ರಚಾರ ಇಲಾಖೆ ಸಹಯೋಗ ದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ಸುಮಾರು ಎರಡುವರೆ ವರ್ಷಗಳ ಕಾಲ ಪ್ರಪಂಚದ ವಿವಿಧ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ,ಭಾರತಕ್ಕೆ ಹೊಂದು ವಂತಹ ಸಂವಿಧಾನವನ್ನು ರಚಿಸಿ,ಅದಕ್ಕೆ ಅಳವಡಿ ಕೊಳ್ಳುವಂತೆ ಮಾಡಿದ ಅವರ ಬುದ್ದಿವಂತಿಕೆ ಹಾಗೂ ದೇಶಪ್ರೇಮ ಈ ನಾಡಿನ ಪ್ರತಿಯೊಬ್ಬ ಯುವಜನರಿಗೂ ಮಾದರಿ ಯಾಗಬೇಕು ಎಂದರು.
ಪ್ರಪoಚದ ಬೃಹತ್ ಲಿಖಿತ ಸಂವಿಧಾನ ಭಾರತದ್ದಾಗಿದೆ.500ಕ್ಕೂ ಹೆಚ್ಚು ಕಲಂಗಳನ್ನು ಹೊಂದಿ,ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಜಾತಿ,ಧರ್ಮ,ಭಾಷೆ,ಪ್ರದೇಶ,ಲಿಂಗ ತಾರತಮ್ಯದಿಂದ ಅವಕಾಶ ವಂಚಿತನಾಗಬಾರದು ಎಂಬ ಮಹದಾಸೆಯನ್ನು ಹೊಂದಿರುವ ಭಾರತದ ಸಂವಿಧಾನದ ಪೀಠಿಕೆಯಲ್ಲಿಯೇ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಘೋಷವಾಕ್ಯ ಹೊಂದಿದೆ. ಸoವಿಧಾನ ಜಾರಿಗೆ ಬಂದ 75 ವರ್ಷಗಳಲ್ಲಿ ನೂರಕ್ಕೂ ಹೆಚ್ಚು ತಿದ್ದುಪಡಿಗಳು ಆಗಿರುವುದು, ಆಯಾಯ ಕಾಲಘಟ್ಟಕ್ಕೆ ಅಗತ್ಯ ಮಾರ್ಪಾಡುಗಳನ್ನು ಮಾಡಲಾಗಿದೆಯೇ ಹೊರತು, ಸಂಪೂರ್ಣ ಬದಲಾವಣೆ ಆಸಾಧ್ಯ. ಆದರೆ ಕೆಲವರು ನಾವು ಸಂವಿಧಾನ ಬದಲಾಯಿಸಲೇ ಬಂದಿದ್ದೇವೆ ಎಂಬ ಮಾತುಗಳನ್ನಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.ಇoತಹವರಿಗೆ ಜನತೆ ತಕ್ಕ ಪಾಠ ಕಲಿಸಬೇಕೆಂದು ಮುರುಳೀಧರ ಹಾಲಪ್ಪ ನುಡಿದರು.

ಭಾರತ ಸಂವಿಧಾನಕ್ಕೆ 75 ವರ್ಷಗಳಾದರೂ ಅದರ ಬಗ್ಗೆ ಜಾಗೃತಿ ಮೂಡಿಸುವ ಪರಿಸ್ಥಿತಿ ಬಂದೊದಗಿರುವುದು ನಿಜಕ್ಕೂ ವಿಪರ್ಯಾಸ.ಯುವಜನರು ಮೊದಲು ಸಂವಿಧಾನವನ್ನು ಓದಬೇಕು. ಕೇವಲ ನ್ಯಾಯವಾದಿಗಳೇ ಓದಬೇಕು ಎಂಬುದಿಲ್ಲ. ಸಂವಿಧಾನದಲ್ಲಿ ಎಲ್ಲವೂ ಅಡಕವಾಗಿದೆ. ಹಾಗೂ ಪ್ರತಿಯೊಬ್ಬರು ಸಂವಿಧಾನವನ್ನು ಓದಿ ತಿಳಿದುಕೊಳ್ಳಬೇಕಿದೆ ಎಂದರು.