ದೇಶದ ಯಾವುದೇ ರಾಜ್ಯಗಳು ಕಟ್ಟಡ ಕಾರ್ಮಿಕರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಯಾವುದೇ ಕಾರಣಕ್ಕೂ ಅನ್ಯ ಯೋಜನೆಗಳಿಗೆ ಬಳಸದೆ ಕಟ್ಟಡ ಕಾರ್ಮಿಕರ ಅಭಿವೃದ್ಧಿಗಾಗಿ ಮಾತ್ರ ಬಳಸಬೇಕು ಎಂದು ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗಿರೀಶ್ ಆಗ್ರಹಿಸಿದರು.
ಅವರು ಫೆಬ್ರವರಿ 29 ಕಟ್ಟಡ ಕಾರ್ಮಿಕರ ಬೇಡಿಕೆ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕಟ್ಟಡ ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ 1996ರಲ್ಲಿ ಜಾರಿಗೆ ಬಂದ ಕಾಯ್ದೆಯನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಮತ್ತು ಈ ಕಾಯ್ದೆ ಕಾರ್ಮಿಕರ ವಿರುದ್ದವಾಗಿ ತಿದ್ದಪಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು. ಕಟ್ಟಡ ಕಾರ್ಮಿಕರಿಗಾಗಿ ಮೀಸಲಿಟ್ಟಿರುವ ಹಣವನ್ನು ಸುಪ್ರೀಂಕೋರ್ಟ್ ನಿರ್ದೇಶನದಂತೆ ಅನ್ಯ ಯೋಜನೆಗಳಿಗೆ ಬಳಸಬಾರದು 1996ರ ಮೂಲ ಸೆಸ್ ಕಾಯ್ದೆ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಇರುವ 1 ಪರ್ಸೆಟ್ ಸಸೆನ್ನು 2 ಪರ್ಸೆಟ್ಗೆ ಹೆಚ್ಚಳ ಮಾಡಬೇಕು ಹೆಚ್ಚಳ ಮಾಡಿದ ಸೆಸ್ ಹಣವನ್ನು ಕಾರ್ಮಿಕರ ಯೋಗಕ್ಷೇಮಕ್ಕೆ ಹೆಚ್ಚು ಗಣನೀಯವಾಗಿ ಆರ್ಥಿಕ ಬೆಂಬಲ ವೃದ್ಧಿಸಲು ಬಳಕೆಯಾಗಬೇಕು ಹಾಗೂ ಖಾಸಗೀ ಸೆಸ್ 10 ಲಕ್ಷ, ವಾಣಿಜ್ಯ ಸೆಸ್ 5 ಲಕ್ಷ ಸೆಸ್ ಸಂಗ್ರಹದ ಮಿತಿಯನ್ನು ಯಾವುದೇ ಕಾರಣಕ್ಕೂ ಹೆಚ್ಚಳ ಮಾಡಬಾರದು ಮತ್ತು ಒಳಾಂಗಣ ಅಲಂಕಾರಕ್ಕೂ ಸೆಸ್ ಸಂಗ್ರಹಿಸಬೇಕು ಎಂದು ಆಗ್ರಹಿಸಿದರು ಎಲ್ಲಾ ರಾಜ್ಯಗಳು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾನೂನನ್ನು ಮತ್ತು ಸೌಲಭ್ಯಗಳನ್ನು ಸಮಾನ ರೀತಿಯಲ್ಲಿ ವಿತರಿಸಬೇಕು.
ರಾಜ್ಯ ಮಂಡಳಿ ಸದಸ್ಯ ಗೋವಿಂದರಾಜು ಮಾತನಾಡಿ ಈಗ ನಮ್ಮ ರಾಜ್ಯದಲ್ಲಿರುವ ತಿಂಗಳ 3000 ಪಿಂಚಣಿಯನ್ನು ಕನಿಷ್ಠ 6000 ಸಾವಿರಕ್ಕೆ ಹೆಚ್ಚಳ ಮಾಡಬೇಕು. ಕಾರ್ಮಿಕ ಇಲಾಖೆಯ ಆಯುಕ್ತರ ಕಛೇರಿಯಲ್ಲಿ (ಎಐಸಿಬಿಸಿಡಬ್ಲೂö್ಯ) ನಮ್ಮ ಸಂಘಟನೆಯ ಸದಸ್ಯರನ್ನು ಎಲ್ಲಾ ರಾಜ್ಯದಲ್ಲಿ ಮಂಡಳಿ ಸದಸ್ಯರನ್ನಾಗಿ ನೇಮಿಸುವುದು. ಹಾಗೂ ಲಿಂಗ ಅಸಮಾನತೆಯನ್ನು ಹೋಗಲಾಡಿಸಿ ಹೆಣ್ಣು-ಗಂಡು ಎಂಬ ಬೇದ-ಭಾವವಿಲ್ಲದೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದರು ನಿರ್ಮಾಣ ಕಾರ್ಮಿಕರ ಬಾಕಿ ಇರುವ ಸೌಲಭ್ಯಗಳನ್ನು ಎಲ್ಲಾ ರಾಜ್ಯ ಸರ್ಕಾರಗಳು ಹಾಗೂ ಮಂಡಳಿಯ ಅಧಿಕಾರಿಗಳು ಕೂಡಲೇ ವಿಲೇವಾರಿ ಮಾಡಬೇಕು. ಪಾಂಡಿಚೆರಿ ಕೇಂದ್ರಾಡಳಿತ ಪ್ರದೇಶದಲ್ಲಿ ಜಾರಿಯಲ್ಲಿರುವಂತೆ ರಾಷ್ಟ್ರೀಯ ಹಬ್ಬದ ದಿನವಾದ ದೀಪಾವಳಿಯ ಉಡುಗೊರೆಯಾಗಿ ಪ್ರತಿ ವರ್ಷ 10,000 ಸಾವಿರ ಬೋನಸ್ ನೀಡಬೇಕು ಎಂದು ಆಗ್ರಹಿಸಿದರು
ಕಟ್ಟಡ ಕಾರ್ಮಿಕರಿಗೆ ಮೀಸಲಿಟ್ಟ ಹಣ-ಅನ್ಯ ಯೋಜನೆಗಳಿಗೆ ಬಳಸಬೇಡಿ

Leave a comment
Leave a comment