ತುಮಕೂರು: ರಾಜ್ಯದಲ್ಲಿ ಈ ಬಾರಿ ೧೩೦ ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಇಂದಿಲ್ಲಿ ವ್ಯಕ್ತಪಡಿಸಿದರು.
ರಾಜ್ಯದ ಜನತೆ ಹೊಸ ಸರ್ಕಾರ ಮತ್ತು ಬದಲಾವಣೆಯನ್ನು ಬಯಸಿದ್ದಾರೆ. ಹಾಗಾಗಿ ಕಾಂಗ್ರೆಸ್ ಪಕ್ಷದ ಅಧಿಕಾರ ಹಾಗೂ ಕಾಂಗ್ರೆಸ್ ಪಕ್ಷದ ಆಡಳಿತ ಬರುತ್ತದೆ ಎಂದು ಅವರು ಹೇಳಿದರು.
ನಗರದ ಹೊರವಲಯದ ಗೊಲ್ಲಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ತಮ್ಮ ಪತ್ನಿ ಕನ್ನಿಕ ಪರಮೇಶ್ವರ್ ಅವರೊಂದಿಗೆ ತೆರಳಿ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್ ಪಕ್ಷ ಸ್ವಂತ ಬಲದ ಮೇಲೆ ಸರ್ಕಾರ ರಚಿಸುತ್ತದೆ. ಇದನ್ನು ಅನೇಕ ಸಮೀಕ್ಷೆಗಳು ಸಹ ಹೇಳಿವೆ. ಜನರ ಭಾವೆಯೂ ಕೂಡಾ ಇದೇ ಆಗಿದೆ. ಈ ಬಗ್ಗೆ ನಾನು ಇಡೀ ರಾಜ್ಯದಲ್ಲಿ ಪ್ರವಾಸ ಮಾಡಿದ ಸಂದರ್ಭದಲ್ಲಿ ಗಮನಿಸಿದ್ದೇನೆ ಎಂದರು.
ಡಾ.ಜಿ ಪರಮೇಶ್ವರ್ ತಮ್ಮ ಪತ್ನಿ ಕನ್ನಿಕ ಪರಮೇಶ್ವರ್ ಅವರೊಂದಿಗೆ ತೆರಳಿ ಮತದಾನ ಮಾಡಿದರು

Leave a comment
Leave a comment