ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನಿರ್ಧಾರ ಘೋಷಿಸಿದ ಮಾಜಿ ಸಚಿವ ಸೊಗಡು ಶಿವಣ್ಣ.
ತುಮಕೂರು – ಕಳೆದ ೩೦ ವರ್ಷದಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಹಾಗೂ ತುಮಕೂರು ನಗರದ ಬಿಜೆಪಿ ಉರಿಯ ಕಟ್ಟಾಳು ಎಂದು ಬಿಂಬಿತವಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣರವರು ೨೦೨೩ರ ಚುನಾವಣೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಕಾರ್ಯಕರ್ತರ ಸಭೆಯಲ್ಲಿ ಘೋಷಿಸಿದ್ದಾರೆ.
ಇನ್ನು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸೊಗಡು ಶಿವಣ್ಣರವರು ತುಮಕೂರು ನಗರದ ಜನಪ್ರಿಯ ಶಾಸಕರಾಗಿ ಗುರುತಿಸಿಕೊಂಡಿದ್ದರು ನಂತರದ ಬೆಳವಣಿಗೆಯಲ್ಲಿ ಶಾಸಕ ಜ್ಯೋತಿಗಳೆರವರಿಗೆ ಟಿಕೆಟ್ ಲಭಿಸಿ ಶಾಸಕರಾಗಿದ್ದರು.
ಇನ್ನು ೨೦೨೩ರ ಚುನಾವಣೆಯು ಸಹ ಸಮೀಪ ಸೇರ್ತಿದ್ದು ನೆನ್ನೆ ಬಿಡುಗಡೆಯಾದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಮುಖಂಡರ ವಿರುದ್ಧ ತೀವ್ರ ಬೇಸರ ವ್ಯಕ್ತಪಡಿಸಿದ ಮಾಜಿ ಸಚಿವ ಸೊಗಡು ಶಿವಣ್ಣರವರು ಇಂದು ತುಮಕೂರಿನಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಭೆಯನ್ನು ನಡೆಸಿ ಅಭಿಮಾನಿಗಳ ಕಿಸಿ ಮಾತನಾಡಿದ ಅವರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸುವ ಮೂಲಕ ಬಿಜೆಪಿ ಪಕ್ಷದ ನಂಟನ್ನ ಕಡಿದುಕೊಳ್ಳಲು ಮುಂದಾಗಿದ್ದಾರೆ.
ಇನ್ನು ರಾಜೀನಾಮೆ ಬಗ್ಗೆ ಪತ್ರಕರ್ತರೊಂದಿಗೆ ಮಾತನಾಡಿರುವ ಅವರು ನನ್ನ ಪಕ್ಷದ ಹಿರಿಯ ಮುಖಂಡರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಿಗೆ ಸಲ್ಲಿಸುತ್ತೇನೆ ಇನ್ನು ನಾನು ಪಕ್ಷದ ಕಚೇರಿಯ ಬಾಗಿಲನ್ನು ಸಹ ತುಳಿಯಲು ಇಷ್ಟಪಡುವುದಿಲ್ಲ ಇನ್ನು ಪಕ್ಷದಲ್ಲಿ ನನಗೆ ಯಾವ ಸ್ಥಾನಮಾನ ಇನ್ನು ಮುಂದೆ ಇರುವುದಿಲ್ಲ ನಾಳೆ ನನ್ನ ರಾಜಿನಾಮೆ ಪತ್ರವನ್ನು ಸಲ್ಲಿಸುತ್ತಿದ್ದೇನೆ ಎಂದರು.
ನನಗೆ ಯಾವುದೇ ಹೈಕಮಾಂಡ್ ಇಲ್ಲ ಇನ್ನು ನನ್ನ ಕ್ಷೇತ್ರದ ಎರಡು ಲಕ್ಷ ಮತದಾರರೇ ನನ್ನ ಹೈಕಮಾಂಡ್ ಎಂದ ಅವರು ನನಗೆ ಬೆಲೆ ಇಲ್ಲದ ಜಾಗದಲ್ಲಿ ನಾನು ಜಂಗ್ಲಿ ಆಗಲು ಇಷ್ಟಪಡುವುದಿಲ್ಲ ಒಮ್ಮೆ ಕಾಲನ್ನ ಆಚೆ ತೆಗೆದರೆ ಮತ್ತೊಮ್ಮೆ ಯಾವುದೇ ಕಾರಣಕ್ಕೂ ನನ್ನ ಕಾಲನ್ನು ಆ ಜಾಗಕ್ಕೆ ಇಡುವುದಿಲ್ಲ ಎನ್ನುವ ಮೂಲಕ ತಮ್ಮ ನೋವನ್ನು ಹಾಗೂ ಆಕ್ರೋಶವನ್ನು ಹೊರ ಹಾಕಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಪಕ್ಷಕ್ಕೆ ಮೂಲ ಬಿಜೆಪಿಗರು ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿ ಪಕ್ಷಕ್ಕೆ ದೊಡ್ಡ ಹೊಡೆತ ನೀಡಲು ಮುಂದಾಗಿದ್ದು ಇನ್ನು ಕಾರ್ಯಕರ್ತರ ರಾಜೀನಾಮೆ ನಿರ್ಧಾರ ಅವರಿಗೆ ಬಿಟ್ಟದ್ದು ಅದು ಅವರ ಸ್ವಂತಿಕೆ ನಿರ್ಧಾರ ಇನ್ನು ತುಮಕೂರು ಜಿಲ್ಲೆಯ ಹಲವು ಮೂಲ ಬಿಜೆಪಿಗರು ಸಹ ರಾಜೀನಾಮೆ ನೀಡಲು ಸಿದ್ದರಾಗಿದ್ದು ಮುಂದಿನ ದಿನದಲ್ಲಿ ರಾಜೀನಾಮೆ ನೀಡುವವರ ಸಂಖ್ಯೆಯು ಸಹ ಹೆಚ್ಚಾಗಲಿದೆ ಎಂದಿದ್ದಾರೆ.
ಅದೇನೇ ಇರಲಿ ಇದುವರೆಗೂ ಬಿಜೆಪಿಯ ಕಟ್ಟಾಳು ಎಂದು ಗುರುತಿಸಿಕೊಂಡಿದ್ದ ಮಾಜಿ ಸಚಿವ ಸೊಗಡು ಶಿವಣ್ಣರವರ ನಡೆ ನಿಜಕ್ಕೂ ಬಿಜೆಪಿ ಪಕ್ಷಕ್ಕೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸುವುದರ ಜೊತೆಗೆ ಹಾಲಿ ಶಾಸಕ ಜ್ಯೋತಿ ಗಣೇಶ ರವರಿಗೂ ಸಹ ದೊಡ್ಡ ಹೊಡೆತ ನೀಡಲು ಮುಂದಾಗಿದೆ ಎಂದರೆ ತಪ್ಪಾಗಲಾರದು.
ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನಿರ್ಧಾರ ಘೋಷಿಸಿದ ಮಾಜಿ ಸಚಿವ ಸೊಗಡು ಶಿವಣ್ಣ.

Leave a comment
Leave a comment