ಕನ್ನಡಿಗರ ಸ್ವಾಭಿಮಾನಿ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಬಹುದೊಡ್ಡ ಆ¸ಸ್ತಿಯಾಗಿದೆ. ಜ್ಞಾನದ ಮೂಲವಬÀÄ್ನ ಹೊಂದಿರುವ ಈ ಸಂಸ್ಥೆಗೆ ಶತಮಾನಗಳ ಇತಿಹಾಸವಿದ್ದು ಕನ್ನಡ ನಾಡಿನ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುತ್ತಾ ಇದ್ದರೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಇರುವ ಸ್ಥಳಸದಲ್ಲೇ ಕನ್ನಡಿಗರು ಅಲ್ಪಸಂಖ್ಯಾತರಾಗಿ ಕಾಣುತ್ತಿರುವುದು ಆತಂಕಕಾರಿ ವಿಷಯವಾಗಿದೆ ಎಂದು ವಿಧಾನಪರಿಷತ್ತಿನ ಸದಸ್ಯರಾದ ವೈ.ಎ.ನಾರಾಯಣಸ್ವಾಮಿಯವರು ನುಡಿದರು.
ಅವರು ತುಮಕೂರು ಜಿಲ್ಲಾ ಮತ್ತು ತಾಲ್ಲೂಕು ಕ.ಸಾ.ಪ. ಏರ್ಪಡಿಸಿದ್ದ ನೂತನ ಶಾಸಕರಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಗರದ ಕನ್ನಡ ಭವನದಲ್ಲಿ ಉದ್ಘಾಟಿಸಿ ಮಾತನಾಡಿದರು.
ರಾಜ್ಯಾದ್ಯಂತ ಇರುವ ಸರ್ಕಾರಿ ಕನ್ನಡ ಶಾಲೆಗಳು ವಿದ್ಯಾರ್ಥಿಗಳಿಲ್ಲದೆ ಸೊರಗುತ್ತಿವೆ. ಗ್ರಾಮೀಣ ಪ್ರದೇಶಗಳತ್ತ ಇಂಗ್ಲಿಷ್ ಮಾಧ್ಯಮ ಶಾಲೆಗಳು ಲಗ್ಗೆ ಇಟ್ಟಿವೆ. ಇಂತಹ ಸನ್ನಿವೇಶದಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸುವ ಅವಶ್ಯಕತೆ ಇದೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಕೊರತೆ ಇದೆ. ಸರ್ಕಾರ ಇದರ ಕಡೆ ಗಮನಹರಿಸಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಗ್ಯಾರಂಟಿಯನ್ನು ನೀಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ತುಮಕೂರು ನಗರದ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ರವರು ಕನ್ನಡಿಗರ ಅಭಿಮಾನದ ಸಂತೇಕವಾಗಿ ಕಾರ್ಯ ನಿರ್ವಹಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತು ನಡೆಸುತ್ತಿರುವ ಚಟುವಟಿಕೆಗಳು ಇತರ ಕನ್ನಡಪರ ಸಂಘಸAಸ್ಥೆಗಳಿಗೆ ಮಾದರಿಯಾಗಿವೆ. ಕೇವಲ ನವೆಂಬರ್ನ್ನು ಕನ್ನಡ ಮಾಸವೆನ್ನದೆ ವರ್ಷಪೂರ್ತಿ ಕನ್ನಡ ವಾತಾವರಣದ ಮಾಸವಾಗಬೇಕು ಎಂದರು.
ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಿ.ಸುರೇಶ್ ಗೌಡ್ರು ಮಾತನಾಡಿ, ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಕೀಳರಿಮೆ ಮನೋಭಾವವನ್ನು ಬಿಟ್ಟು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಧೈರ್ಯದಿಂದ ಮುನ್ನುಗ್ಗಬೇಕಾಗಿದೆ, ಶೇ. ೧೦೦ರಷ್ಟು ಅಂಕ ಪಡೆದಿರುವ ವಿದ್ಯಾರ್ಥಿಗಳೆಲ್ಲರೂ ಗ್ರಾಮೀಣ ಹಿನ್ನೆಲೆಯ ಶಾಲಾ ಮಕ್ಕಳೇ ಆಗಿರುವುದು ಅತಿ ಸಂತಸವಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಚಿದಾನಂದ್ ಎಂ. ಗೌಡ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ ದೂರದೃಷ್ಟಿಯ ಫಲವಾಗಿ ಸ್ಥಾಪಿತವಾದ ಕನ್ನಡ ಸಾಹಿತ್ಯ ಪರಿಷತ್ತು ಒಂದು ಸ್ವಾಯತ್ತ ಸಂಸ್ಥೆಯಾಗಿದೆ ಎಂದ ಅವರು ಜಿಲ್ಲಾ ಕ.ಸಾ.ಪ. ನಡೆಸುತ್ತಿರುವ ಚಟುವಟಿಕೆಗಳನ್ನು ಶ್ಲಾಘಿಸಿದರು.
ಇದೇ ಸಂದರ್ಭದಲ್ಲಿ ಶೇ. ೧೦೦ರಷ್ಟು ಫಲಿತಾಂಶ ಪಡೆದ ೨೧ ಶಾಲೆಗಳ ಮುಖ್ಯಸ್ಥರನ್ನು, ೨೦೦ ಶೇ. ೧೦೦ರಷ್ಟು ಅಂಕ ಪಡೆದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳನ್ನು ಹಾಗೂ ೨೫ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳನ್ನು ಪ್ರಮಾಣ ಪತ್ರವನ್ನು ನೀಡುವ ಮೂಲಕ ಸನ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕ.ಸಾ.ಪ. ಅಧ್ಯಕ್ಷರಾದ ಕೆ.ಎಸ್.ಸಿದ್ಧಲಿಂಗಪ್ಪ ವಹಿಸಿದ್ದರು. ಹಿರಿಯ ಸಾಹಿತಿಗಳಾದ ವಿದ್ಯಾವಾಚಸ್ಪತಿ ಕವಿತಾಕೃಷ್ಣ ವೇದಿಕೆಯಲ್ಲಿದ್ದರು.
ಜಿಲ್ಲಾ ಕ.ಸಾ.ಪ. ಕಾರ್ಯದರ್ಶಿ ಡಾ. ಡಿ.ಎನ್.ಯೋಗೀಶ್ವರಪ್ಪ ಸ್ವಾಗತಿಸಿದರು. ತಾಲ್ಲೂಕು ಕ.ಸಾ.ಪ. ಅಧ್ಯಕ್ಷರಾದ ಚಿಕ್ಕಬೆಳ್ಳಾವಿ ಶಿವಕುಮಾರ್ ವಂದಿಸಿದರು. ಜಿಲ್ಲಾ ಸಂಘಟನಾ ಸಹಕಾರ್ಯದರ್ಶಿ ತೇಜಸ್ವಿ ನಿರೂಪಿಸಿದರು.
ಭಾವಚಿತ್ರ : ತುಮಕೂರು ಜಿಲ್ಲಾ ಮತ್ತು ತಾಲ್ಲೂಕು ಕ.ಸಾ.ಪ. ಏರ್ಪಡಿಸಿದ್ದ ನೂತನ ಶಾಸಕರಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ವಿಧಾನ ಪರಿಷತ್ತಿನ ಸದಸ್ಯ ವೈ.ಎ.ನಾರಾಯಣಸ್ವಾಮಿ ಉದ್ಘಾಟಿಸಿದರು. ಚಿತ್ರದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್ಗೌಡ್ರು, ಕೆಎಸ್.ಸಿದ್ಧಲಿಂಗಪ್ಪ, ವಿದಾನ ಪರಿಷತ್ತಿನ ಸದಸ್ಯರಾದ ಚಿದಾನಂದ ಎಂ. ಗೌಡ, ಕವಿತಾಕೃಷ್ಣ, ಡಾ. ಡಿ.ಎನ್.ಯೋಗೀಶ್ವರಪ್ಪ ಇತರರು ಇದ್ದಾರೆ.