ತುಮಕೂರು ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿ ಗೋಷ್ಠಿ ನಡೆಸಿದ ಪಕ್ಷೇತರ ಅಭ್ಯರ್ಥಿ ಸೊಗಡು ಶಿವಣ್ಣ ಮಾತನಾಡುತ್ತಾ ನನ್ನ ಅಂತಿಮ ಚುನಾವಣೆಗೆ ಜನತೆಯ ಬೆಂಬಲಕ್ಕಾಗಿ ಮಾಧ್ಯಮಗಳ ಮೂಲಕ ಕೋರುತ್ತಿದ್ದೇನೆ ನನ್ನ ಸ್ಪರ್ಧೆ ಜನರ ಹಿತಕ್ಕಾಗಿ, ಜಾತ್ಯತೀತ ಸ್ಪರ್ಧೆ ಎಂದು ಹೇಳಿದರು.

ಸ್ಮಾರ್ಟ್ ಸಿಟಿಯ ಅವ್ಯವಹಾರ ಹಾಗೂ ಈ ಕುರಿತು ಮುಂದಿನ ದಿನಗಳಲ್ಲಿ ಸಿ ಬಿ ಐ ತನಿಖೆ ನಡೆಸಲು ಹೋರಾಟ ಮಾಡುತ್ತೇನೆ ಎಂದರು. ೧೨೦ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ರಿಂಗ್ ರಸ್ತೆ ಕಳಪೆ ಗುಣಮಟ್ಟದ್ದು ಎಂದರು. ನೆನ್ನೆ ರಾತ್ರಿ ಸುರಿದ ಮಳೆಗೆ ತುಮಕೂರು ನಗರದ ಎಲ್ಲಾ ರಸ್ತೆಗಳು ನೀರು ಸಾರಾಗವಾಗಿ ಸಾಗದೆ ರಸ್ತೆಯಲ್ಲಿಯೇ ನೀರು ನಿಂತು ಗಬ್ಬುನಾರುತ್ತಿದೆ ಈ ವಿಷಯ ಜನ ಸಾಮಾನ್ಯರಿಗೆ ತಿಳಿದಿದೆ ಈ ರೀತಿಯಾದ ಅವ್ಯವಸ್ಥೆಯಲ್ಲೂ ಅಪ್ಪ ಮಕ್ಕಳು ತುಮಕೂರು ಸ್ಮಾರ್ಟ್ ಸಿಟಿ ಎಂದು ಕರೆಯುತ್ತಾರೆ ಎಲ್ಲಿದೆ ನಿಮ್ಮ ಸ್ಮಾರ್ಟ್ ಸಿಟಿ ಎಂದು ಪ್ರಶ್ನೆ ಹಾಕಿದರು.
ನಾನು ಬಸವಣ್ಣ, ನಡೆದಾಡುತ್ತಿದ್ದ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಆಶಯಗಳಂತೆ ನಡೆದುಕೊಂಡು ಬಂದಿದ್ದೇನೆ ಭ್ರಷ್ಟಾಚಾರ ರಹಿತ, ಸ್ವಜನ ಪಕ್ಷ ಪಾತ ಮಾಡದೆ ರಾಜಕೀಯ ಮಾಡಿಕೊಂಡು ಬಂದಿದ್ದೇನೆ ಎಂದು ಹೇಳಿದರು.
ಇತ್ತೀಚಿಗೆ ತುಮಕೂರು ನಗರ ಮತ್ತು ಗ್ರಾಮಂತರ ಭಾಗಗಳಲ್ಲಿ ನಡೆದ ರೋಡ್ ಷೋಗಳಲ್ಲಿ ಬೇರೆ ಜಿಲ್ಲೆಗಳಿಂದ ಜನರನ್ನು ಕರೆದುಕೊಂಡು ಬಂದಿದ್ದಾರೆ ಇದನ್ನು ಗಮನಿಸಿದರೆ ಗೊತ್ತಾಗುತ್ತೆ ಈ ಭಾರಿ ಬಿಜೆಪಿಗೆ ಪಕ್ಷಕ್ಕೆ ಒಲವು ಇಲ್ಲ ಎಂದು ಗೊತ್ತಾಗುತ್ತೆ ಎಂದು



