ತುಮಕೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ೨೦೨೨-೨೩ನೇ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ. ೧೦೦ ರಷ್ಟು ಫಲಿತಾಂಶ ಪಡೆದ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ಶಾಸಕರಾದ ಕೆ. ಷಡಕ್ಷರಿ, ಡಾ. ರಂಗನಾಥ್, ಜ್ಯೋತಿಗಣೇಶ್, ಸುರೇಶ್ಗೌಡ, ಎಂ.ಟಿ. ಕೃಷ್ಣಪ್ಪ, ಹೆಚ್.ವಿ. ವೆಂಕಟೇಶ್, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿ.ಪಂ. ಸಿಇಓ ಪ್ರಭು ಜೆ., ಡಿಡಿಪಿಐ ಸಿ. ನಂಜಯ್ಯ ಮತ್ತಿತರರು ಚಿತ್ರದಲ್ಲಿದ್ದಾರೆ.