ಸಿದ್ಧಾರ್ಥ ಎಂಜಿನಿಯರಿoಗ್ ಕಾಲೇಜ್ನ ನೂತನ ಬಸ್ ಹಾಗೂ ಪ್ರವೇಶಾತಿ ಘಟಕ ಉದ್ಘಾಟನೆ
ತುಮಕೂರು: ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನೂತನವಾಗಿ ಎರಡು ಕಾಲೇಜು ಬಸ್ ಹಾಗೂ ಪ್ರವೇಶಾತಿ ಘಟಕವನ್ನು ಗೃಹ ಸಚಿವರು ಹಾಗೂ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ.ಜಿ ಪರಮೇಶ್ವರ ಅವರು ಉದ್ಘಾಟಿಸಿದರು.
ಕಾಲೇಜು ಬಸ್ ಹಾಗೂ ಪ್ರವೇಶಾತಿ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನೂತನ ಬಸ್ ಬಿಡುಗಡೆ ಮಾಡಲಾಗಿದೆ, ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಹಾಗೂ ಸುರಕ್ಷಿತವಾಗಿ ಕಾಲೇಜು ತಲುಪಲು ಈ ವ್ಯವಸ್ಥೆ ಮಾಡಲಾಗಿದೆ. ಸುಸಜ್ಜಿತ ಆಸನ ವ್ಯವಸ್ಥೆವುಳ್ಳ ಮೇಲ್ದರ್ಜೆಯ ಬಸ್ ಇದಾಗಿದೆ ಎಂದರು.
ದೂರದಿಂದ ಆಗಮಿಸುವ ಹೆಚ್ಚಿನ ವಿದ್ಯಾರ್ಥಿಗಳಿಗೆ ಅನೂಕೂಲ ಮಾಡಿಕೊಡುವ ದೃಷ್ಟಿಯಿಂದ ಪ್ರವೇಶಾತಿ ಘಟಕವನ್ನು ಇದೇ ಸಂದರ್ಭದಲ್ಲಿ ಉದ್ಘಾಟಿಸಲಾಗಿದೆ.
ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದ್ಯಸರಾದ ಶ್ರೀಮತಿ ಕನ್ನಿಕಾ ಪರಮೇಶ್ವರಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನಾನೂಕೂಲವಾಗಬಾರದು ಎಂಬ ನಿಟ್ಟಿನಲ್ಲಿ ವಿಶಾಲವಾದ ಆಸನಗಳುಳ್ಳ ಮತ್ತು ಮೇಲ್ದರ್ಜೆಯ ಎರಡು ಬಸ್ಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದರು.
ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್.ರವಿಪ್ರಕಾಶ ಮಾತನಾಡಿ, ಎರಡು ನೂತನ ಕಾಲೇಜು ಬಸ್ ಬಿಡಗಡೆಗೊಳಿಸಿರುವುದರಿಂದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲಕರವಾಗಿದೆ ಹಾಗೂ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಬಂದು ತಮ್ಮ ವಿದ್ಯಾಭ್ಯಾಸ ಸರಿಯಾದ ರೀತಿಯಲ್ಲಿ ಮುಂದುವರೆಸುತ್ತಾರೆ ಎಂದರು.
ಸಾಹೇ ವಿವಿಯ ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ್ ವೀರಯ್ಯ, ಎಸ್ಎಸ್ಐಟಿಯ ಡೀನ್ ಡಾ ರೇಣುಕಾ ಲತಾ, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥರಾದ ಡಾ.ಸಂಜೀವ್ ಕುಮಾರ್, ಎಂಬಿಎ ವಿಭಾಗದ ಪ್ರಾಂಶುಪಾಲರಾದ ಡಾ. ಅಜ್ಮತ್ ಉಲ್ಲಾ, ಬಿಬಿಎಂ ಮತ್ತು ಬಿಕಾಂ ವಿಭಾಗದ ಪ್ರಾಂಶುಪಾಲರಾದ ಡಾ.ಮಮತಾ ಜಿ, ಎಸ್ಎಸ್ಐಟಿ ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ಭಾಗವಹಿಸಿದ್ದರು.
ಸಿದ್ಧಾರ್ಥ ಎಂಜಿನಿಯರಿoಗ್ ಕಾಲೇಜ್ನ ನೂತನ ಬಸ್ ಹಾಗೂ ಪ್ರವೇಶಾತಿ ಘಟಕ ಉದ್ಘಾಟನೆ

Leave a comment
Leave a comment