ಕನ್ನಡ ಭಾಷೆ ಸಾಹಿತ್ಯ ಕಲೆ ಜಾನಪದ ಸಂಸ್ಕೃತಿಗಳ ಸಂವರ್ಧನೆ ಮತ್ತು ಸಂರಕ್ಷಣೆಯ ಮಹದಾಶಯದೊಂದಿಗೆ 1915ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ರವರಿಂದ ಸ್ಥಾಪಿತಗೊಂಡ ಕನ್ನಡ ಸಾಹಿತ್ಯ ಪರಿಷತ್ತು ಇಂದು ನಾಲ್ಕು ಲಕ್ಷಕ್ಕೂ ಮೀರಿ ಆಜೀವ ಸದಸ್ಯರನ್ನು ಹೊಂದಿದ್ದು, ಕನ್ನಡ ಭಾಷಿಕರ ನುಡಿಗುಡಿಯಾಗಿದೆ ಎಂದು ಸಂಶೋಧಕ ಡಾ. ಡಿ.ಎನ್.ಯೋಗೀಶ್ವರಪ್ಪ ಹೇಳಿದರು.
ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಮತ್ತು ಮಡಿವಾಳ ಮಾಚಿದೇವ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಡೀ ದೇಶದಲ್ಲಿಯೇ ಶತಮಾನ ಏಕೈಕ ಭಾಷಿಕ ಸಂಘಟನೆಯಾದ ಕನ್ನಡ ಸಾಹಿತ್ಯ ಪರಿಷತ್ತು ಕರ್ನಾಟಕದ ಏಕೀಕರಣಕ್ಕೆ ಅಪಾರ ಕೊಡುಗೆ ನೀಡಿದೆ. ಭಾಷಿಕ ಜಾಗೃತಿಗಾಗಿ ಹಲವಾರು ಸಮ್ಮೇಳನಗಳನ್ನು ಏರ್ಪಡಿಸಿರುವ ಈ ಪರಿಷತ್ತು ಪುಸ್ತಕ ಪ್ರಕಟಣೆಯಂತಹ ಕಾರ್ಯಕ್ರಮ ನಡೆಸುತ್ತಾ ಹಲವಾರು ಉದಯೋನ್ಮುಖ ಲೇಖಕರನ್ನು ಪ್ರೋತ್ಸಾಹಿಸುತ್ತಿದೆ. ಜಾಗತೀಕರಣದ ಸುಳಿಗಾಳಿಗೆ ಸಿಲುಕಿ ನಲುಗುತ್ತಿರುವ ಕನ್ನಡ ಭಾಷೆಯ ಸಾಹಿತ್ಯವನ್ನು ಡಿಜಿಟಲೀಕರದ ಮೂಲಕ ಜಗತ್ತಿನ ಕನ್ನಡಿಗರಿಗೆ ಪರಿಚಯಿಸುತ್ತಿರುವುದು ಪರಿಷತ್ತಿನ ಉತ್ತಮ ಬೆಳವಣಿಗೆ ಎಂದೇ ಭಾವಿಸಬೇಕು ಎಂದರು.
ಭಾಷೆ ಮತ್ತು ಸಂಸ್ಕೃತಿಯ ನುಡಿಗುಡಿ ಕನ್ನಡ ಸಾಹಿತ್ಯ ಪರಿಷತ್ತು

Leave a comment
Leave a comment