ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮುಖ್ಯ- ಬೆಳೆಸಿಕೊಳ್ಳುವುದು ಅತ್ಯವಶ್ಯ ಎಂದು ತುಮಕೂರು ವಿವಿ ರಸಾಯನಶಾಸ್ತç ವಿಭಾಗದ ಪ್ರೊ. ಹಾಗೂ ಎನ್ಸಿಸಿ ತಂಡದ ಡಾ. ಅರುಣ್ಕುಮಾರ್ ಹೇಳಿದರು.ನಗರದ ಪೋದಾರ್ ಅಂತಾರಾಷ್ಟಿçÃಯ ಶಾಲೆಯಲ್ಲಿ ನಡೆದ ವಿದ್ಯಾರ್ಥಿ ಪ್ರತಿನಿಧಿಗಳ ಅಧಿಕಾರ ಪ್ರತಿಷ್ಠಾನ ಹಾಗೂ ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಇತರ ಜವಾಬ್ದಾರಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಶಾಲಾ ಹಂತದಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಚುನಾವಣೆ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.ಪ್ರತಿಯೊಬ್ಬರೂ ತಮ್ಮ ಕರ್ತವ್ಯಗಳನ್ನು ಶ್ರದ್ಧೆ, ಪ್ರಾಮಾಣಿಕತೆಯಿಂದ ನಿರ್ವಹಿಸಿದರೆ ಅವಕಾಶಗಳು ತಾನಾಗಿಯೇ ಹುಡುಕಿಕೊಂಡು ಬರುತ್ತವೆ ಎಂದು ಅವರು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಾಂಶುಪಾಲರಾದ ಡಾ. ಲವ ಎಂ.ಬಿ. ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಸಮಾಜಕ್ಕೆ ಒಳಿತು ಮಾಡಬೇಕು. ಇದರೊಂದಿಗೆ ನಾಯಕತ್ವ ಗುಣವನ್ನು ಸದಾ ಕಾಲ ಕಾಪಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.ಪೋಷಕರು ಸಹ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುವತ್ತ ಗಮನ ಹರಿಸಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಶಾಲೆಯ ಹಿರಿಯ ಸಂಯೋಜಕರಾದ ಮೋಹನ್ಕುಮಾರ್ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧಿಸಿದರು.ಪ್ರೌಢಶಾಲಾ ವಿಭಾಗದ ಸಂಯೋಜಕರಾದ ಎ.ಆರ್. ಶ್ರೀಧರ್ ವಿದ್ಯಾರ್ಥಿ ಪ್ರತಿನಿಧಿಗಳಿಗೆ ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳಿಸಿದರು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯಾಪಾಧ್ಯಾಯರಾದ ರೇಷ್ಮಾ ಶೆಟ್ಟಿ, ಬೋಧಕ-ಬೋಧಕೇತರ ಸಿಬ್ಬಂದಿ, ಪೋಷಕರು ಭಾಗವಹಿಸಿದ್ದರು.