ತುಮಕೂರು :- ಅನೇಕ ವರ್ಷಗಳ ಬೇಡಿಕೆ ಕೃಷಿ ಉತ್ಪನ್ನಗಳಿಗೆ ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತ್ರಿಗೊಳಿಸಬೇಕು” ಅದು ರೈತರಿಗೆ ಲಾಭದಾಯಕವಾಗುತ್ತಿದ್ದು ಇದು ಕಾನೂನಿನ ಚೌಕಟ್ಟಿನೊಳಗೆ ತರಬೇಕು ಎಂದು ಕೃಷಿ ಆರ್ಥಿಕ ತಜ್ಞ ಮತ್ತು ಕರ್ನಾಟಕ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಡಾ.ಟಿ.ಎನ್.ಪ್ರಕಾಶ್ ಕಮ್ಮರಡಿ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೈತ ಬೆಳೆಗೆ ಲಾಭದಾಯಕ ಕಾನೂನಿನ ಖಾತ್ರಿಯ ಬೆಂಬಲ ಬೆಲೆ ನೀಡುವಂತೆ ರೈತರ ಹೊಸ ಹಕ್ಕೊತ್ತಾಯ ಇಂದು ದೇಶದಾದ್ಯಂತ ಕೇಳಿಬರುತ್ತಿದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಇದನ್ನು ಜಾರಿಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಆಶ್ವಾಸನೆ ನೀಡಿರುತ್ತಾರೆ. ಬಿಜೆಪಿ ಬೆಳೆ ವೈವಿಧ್ಯಗೊಳಿಸುವುದಾದರೆ ಹಾಗೂ ನೊಂದಾಯಿಸಿದ ರೈತರಿಂದ ಬೆಂಬಲ ಬೆಲೆಯಲ್ಲೇ ದ್ವಿದಳ ಧಾನ್ಯ ಜೋಳ, ಹತ್ತಿ ಕೊಳ್ಳಲು ಸಿದ್ಧವಿರುವುದಾಗಿ ತಿಳಿಸಿರುತ್ತದೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಇಂತಹ ಭಾವನಾತ್ಮಕ ವಿಚಾರಗಳು, ವಿಭಜಕ ನಿರೂಪಣೆಗಳಿಂದ ರೈತರು ಹಿಂದೆ ಸರಿದು ಗಂಭೀರ ಸಮಸ್ಯೆಗಳು ಮುನ್ನೆಲೆಗೆ ತರುವ ಬಗ್ಗೆ ಚಿಂತಿಸ ಬೇಕಿದೆ ಎಂದರು.