ತುಮಕೂರು ನಗರಕ್ಕೆ ಕುಡಿಯುವ ನೀರಿನ ಉದ್ದೇಶಕ್ಕೆ ಗೂರೂರು ಜಲಶಾಯದಿಂದ ಬುಗುಡನಹಳ್ಳಿ ಕೆರೆಗೆ ನೀರನ್ನು ಹರಿಸಿದ ಹಿನ್ನೆಲೆ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ರವರು ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ನಂತರ ಮಾತನಾಡಿದ ಶಾಸಕರು ಬುಗುಡನಹಳ್ಳಿ ಕೆರೆಗೆ ನೀರನ್ನು ಹರಿಸುವ ಸಂಬAಧ ಮನವಿ ಮಡಲಾಗಿ, ಮಾನ್ಯ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಾ. ಜಿ.ಪರಮೇಶ್ವರ್ ರವರಿಗೆ ಹಾಗೂ ಹಾಸನದ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ಕೆ.ಎನ್.ರಾಜಣ್ಣ ರವರಿಗೆ ತುಮಕೂರು ನಗರದ ಜನತೆಯ ಪರವಾಗಿ ಹಾಗೂ ತುಮಕೂರು ಮಹಾನಗರಪಾಲಿಕೆಯ ಮೇಯರ್, ಉಪಮೇಯರ್ ಹಾಗೂ ಪಾಲಿಕೆ ಸದಸ್ಯರ ಪರವಾಗಿ ಅಭಿನಂದನೆಗಳನ್ನು ಅರ್ಪಿಸುತ್ತೇನೆ ಹಾಗೂ ಬುಗುಡನಹಳ್ಳಿ ಕೆರೆ ಕಾಲುವೆ ಮರುನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದ ಕಾರಣ ತಡವಾಯಿತು, ಇಲ್ಲದಿದ್ದಲ್ಲಿ ಇನ್ನು ತುರ್ತಾಗಿ ನೀರು ಹರಿಸಲಾಗುತ್ತಿತ್ತು ಎಂದು ಶಾಸಕರು ತಿಳಿಸಿದರು.
ತುಮಕೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆಯಿಲ್ಲ ಏಕೆಂದರೆ, ತುಮಕೂರು ನಗರಕ್ಕೆ ಹೇಮಾವತಿ ನೀರು ಬಂದಿದೆ ಹಾಗೂ ಈಗಾಗಲೇ ಮರಳೂರು ಕೆರೆ, ಗಂಗಸAದ್ರ ಕೆರೆ, ಅಮಾನಿಕೆರೆಯಲ್ಲಿ ನೀರು ತುಂಬಿಸಿರುವ ಕಾರಣ ಕುಡಿಯುವ ನೀರಿಗೆ ಯಾವುದೇ ಭಂಗವಿರುವುದಿಲ್ಲ ಎಂದು ಶಾಸಕರು ತಿಳಿಸಿದರು.
ಈ ಸಂದರ್ಭದಲ್ಲಿ ತುಮಕೂರು ಮಹಾನಗರಪಾಲಿಕೆಯ ಮೇಯರ್ ಪ್ರಭಾವತಿ ಸುಧೀಶ್ವರ್, ಉಪಮೇಯರ್ ಟಿ.ಕೆ.ನರಸಿಂಹಮೂರ್ತಿ, ಪಾಲಿಕೆ ವಿರೋಧ ಪಕ್ಷದ ನಾಯಕರಾದ ವಿಷ್ಣುವರ್ಧನ, ಸದಸ್ಯರಾದ ಮಲ್ಲಿಕಾರ್ಜುನ್, ವೀಣಾ ಮನೋಹರಗೌಡ, ಶ್ರೀನಿವಾಸ್, ಮಾಜಿ ಸದಸ್ಯರಾದ ಇಂದ್ರಕುಮಾರ್, ಮುಖಂಡರಾದ ಮಹೇಶ್ ಬಾಬು, ಪುಟ್ಟರಾಜು ಹಾಗೂ ಪಾಲಿಕೆ ಅಧಿಕಾರಿಗಳು ಇದ್ದರು.
ಬುಗುಡನಹಳ್ಳಿ ಕೆರೆಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಭೇಟಿ

Leave a comment
Leave a comment