ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಡಾ.ಜಿ ಪರಮೇಶ್ವರ ಅವರ ಸಮ್ಮುಖದಲ್ಲಿ ತುಮಕೂರಿನ ಮಾಜಿ ಸಂಸದರಾದ ಮುದ್ದ ಹನುಮೇಗೌಡ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು.
ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಹಾಗೂ ಚಂದ್ರಪ್ಪ, ಸಚಿವರಾದ ಕೆ.ಎನ್.ರಾಜಣ್ಣ, ಶಾಸಕರಾದ ರಂಗನಾಥ್, ಶ್ರೀನಿವಾಸ್, ನಂಜೇಗೌಡ, ನಸೀರ್ ಅಹ್ಮದ್, ಮಾಜಿ ಶಾಸಕರಾದ ವೆಂಕಟರಮಣಪ್ಪ, ರಫಿಕ್ ಅಹ್ಮದ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.