ತುಮಕೂರು:ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಾನೂನಿನ ಅಡಿಯಲ್ಲಿಯೇ ಸಹಾಯ ಮಾಡಬೇಕು. ಸಣ್ಣ ವೆತ್ಯಾಸ ಕಂಡುಬಂದರೂ,ಲೋಕಾಯುಕ್ತ,ಕೋರ್ಟು ಅಂತ ಅಲೆಯುವುದರ ಜೊತೆಗೆ, ನಿರಂತರವಾಗಿ ಸಮಸ್ಯೆಗೆ ಒಳಗಾಗಬೇಕಾಗುತ್ತದೆ ಎಂದು ಶಾಸಕ ಬಿ.ಸುರೇಶಗೌಡ ಪಿಡಿಓಗಳಿಗೆ ಎಚ್ಚರಿಕೆ ನೀಡಿದ್ದಾರೆ.ತಾ.ಪಂ.ಸಭಾಂಗಣದಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿಡಿಓಗಳ ಸಭೆ ನಡೆಸಿ ಮಾತನಾಡಿದ ಅವರು, ಯಾರಿಗೆ ಸಹಾಯ ಮಾಡಬೇಕೆಂದಿದ್ದರು ಕಾನೂನಿನ ಅಡಿಯಲ್ಲಿ ಸಹಾಯಮಾಡಿ, ಅನುಕಂಪ,ಒತ್ತಡಕ್ಕೆ ಒಳಗಾಗಿ ಕಾನೂನು ಮೀರಿದರೆ, ಸಹಾಯ ಪಡೆದವರೇ ಬ್ಲಾಕ್ ಮೇಲ್ ಮಾಡುವ ಸಾಧ್ಯತೆ ಇದೆ. ಹಾಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದರು.ಕಳೆದ ಎರಡು ತಿಂಗಳ ಹಿಂದೆ ನಡೆದ ಪಿಡಿಓಗಳ ಸಭೆಯಲ್ಲಿ ಪ್ರತಿ ಗ್ರಾಮಪಂಚಾಯಿತಿಯಲ್ಲಿಬಡವರಿಗೆ ನಿವೇಶನ ನೀಡಲು ಜಾಗ ಗುರುತಿಸುವುದು, ಸ್ಮಶಾನಕ್ಕೆ ಜಾಗ ಗುರುತಿಸುವುದು, ಕಸ ವಿಲೇವಾರಿ ಘಟಕ ನಿಮಾರ್ಣಕ್ಕೆ ಜಾಗ ಗುರುತಿಸುವಂತೆ ನಿರ್ದೇಶನ ನೀಡಲಾಗಿತ್ತು,ಕೆಲವು ಗ್ರಾಮಪಂಚಾಯಿತಿಗಳಲ್ಲಿ ಕೆಲಸ ಆಗಿದೆ.ಕೆಲವು ಗ್ರಾಮಪಂಚಾಯಿತಿ ಗಳಲ್ಲಿ ಕೆಲಸ ಆಗಿಲ್ಲ.ಇದು ಕಡೆಯ ವಾರ್ನಿಂಗ್ ನೀವು ಸಮರ್ಪಕವಾಗಿ ಕಾರ್ಯನಿರ್ಹಿಸದಿದ್ದರೆ ನಿಮ್ನ ವಿರುದ್ದ ಶಿಸ್ತು ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಪತ್ರ ಬರೆಯುವುದಾಗಿ ಎಚ್ಚರಿಕೆ ನೀಡಿದರು