ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕಲಗುರ್ತಿ ಗ್ರಾಮದ ದೇವಾನಂದ್ ಕೊರಬು ಎಂಬ ಯುವಕ ಪೊಲೀಸರ ಮತ್ತು ಗ್ರಾಮದ ಶಿವರಾಜ್ ಪಾಟೀಲ್ ಅವರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಮತ್ತು ಅವರ ಕುಟುಂಬದವರಿಗೆ ಒಂದು ಸರ್ಕಾರಿ ನೌಕರಿ ನೀಡಬೇಕೆಂದು ಕೋಲಿ ಕಬ್ಬಲಿಗ ಸಮಾಜದ ಸಮನ್ವ ಸಮಿತಿ ವತಿಯಿಂದ ನಗರದಲ್ಲಿ ಸತತವಾಗಿ 45 ದಿನಗಳ ಮಟ್ಟಿಗೆ ಅನಿರ್ದಿಷ್ಟಾವಧಿ ಪ್ರತಿಭಟನೆ ಫಲವಾಗಿ ಇಂದು ಅವರ ಸಹೋದರನಾದ ಕರಣನಿಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಗ್ರೂಪ್ ಡಿ ವೃಂದದ ಹುದ್ದೆಗೆ ತಾತ್ಕಾಲಿಕವಾಗಿ ಕಲಬುರ್ಗಿ ಜಿಲ್ಲಾಧಿಕಾರಿಗಳು ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಮತ್ತು ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ ಅವರ ಸೂಚನೆಮೇರಿಗೆ ಮತ್ತು ಜಿಲ್ಲಾಧಿಕಾರಿಗಳ ಸೂಚನೆಮಮೇರಿಗೆ ಈ ಕುಟುಂಬಕ್ಕೆ ಸರ್ಕಾರಿ ಹುದ್ದೆ ನೀಡಿರುವುದು ನಿಜಕ್ಕೂ ಸಂತಸ ತಂದಿದೆ ಎಂದರು.