ಕುಶಲಕರ್ಮಿಗಳಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ತುಮಕೂರು(ಕ.ವಾ.) ಜು.೪: ಗ್ರಾಮೀಣ ಕೈಗಾರಿಕೆ ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗದ ವತಿಯಿಂದ ೨೦೨೩-೨೪ನೇ ಸಾಲಿಗೆ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿನ ವೃತ್ತಿ ನಿರತ ಗ್ರಾಮೀಣ ಕುಶಲಕರ್ಮಿಗಳಿಗೆ ಬಂಡವಾಳ ಹೂಡಿಕೆ ಸಹಾಯಧನ ಹಾಗೂ ಬ್ಯಾಂಕ್ ಸಾಲಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಬಡಗಿ, ಕ್ಷೌರಿಕ, ದೋಬಿ, ಕಲ್ಲುಕುಟುಕ, ಗಾರೆ, ಕಮ್ಮಾರಿಕೆ, ಬುಟ್ಟಿ ಹೆಣೆಯುವುದು, ಕಸೂತಿ(ಜರಿ ಕೆಲಸ), ಕರಕುಶಲ ವಸ್ತು ತಯಾರಿಸುವ(ಹ್ಯಾಂಡಿಕ್ರಾಫ್ಟ್) ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಿಸಿದ್ದು, ಯೋಜನಾ ವೆಚ್ಚದ ಗರಿಷ್ಟ ಮೊತ್ತ ೩೦ಸಾವಿರ ರೂ.ಗಳಾಗಿದ್ದು, ಯೋಜನಾ ವೆಚ್ಚದ ಶೇ.೬೦ರಷ್ಟು ಗರಿಷ್ಠ ೧೦ಸಾವಿರ ರೂ.ಗಳ ಸಹಾಯಧನ ನೀಡಲಾಗುವುದು ಹಾಗೂ ಬಡಗಿ, ಕ್ಷೌರಿಕ, ದೋಬಿ, ಕಲ್ಲುಕುಟುಕ, ಗಾರೆ, ಕಮ್ಮಾರಿಕೆ ಕಸುಬಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣಗಳನ್ನು ವಿತರಿಸಲಾಗುವುದು.
ಆಸಕ್ತ ವೃತ್ತಿನಿರತ ಕುಶಲಕರ್ಮಿಗಳು ಅರ್ಜಿಯನ್ನು ಉಪನಿರ್ದೇಶಕರು(ಗ್ರಾ.ಕೈ.), ಗ್ರಾಮೀಣ ಕೈಗಾರಿಕಾ ವಿಭಾಗ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ, ಕೈಗಾರಿಕಾ ವಸಾಹತು, ಬಿ.ಹೆಚ್.ರಸ್ತೆ, ತುಮಕೂರು ಅಥವಾ ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜುಲೈ ೨೫ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಉಪನಿರ್ದೇಶಕರು(ಗ್ರಾ.ಕೈ.) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಶಲರ್ಮಿಗಳಿಂದ ಸಹಾಯಧನಕ್ಕಾಗಿ ರ್ಜಿ ಆಹ್ವಾನ

Leave a comment
Leave a comment