ತುಮಕೂರು: ಕ್ಷೇತ್ರದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಉತ್ಸಾಹ ಕಂಡು ಹುಮ್ಮಸ್ಸು ಬಂದಿದೆ. ಎನ್.ಡಿ.ಎ ಅಭ್ಯರ್ಥಿ ಸೋಮಣ್ಣ ಅವರು ಎರಡು ಲಕ್ಷಗಳ ಮತಗಳ ಅಂತರದಿoದ ಚುನಾಯಿತರಾಗಿ ಲೋಕಸಭೇ ಪ್ರವೇಶಿಸುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ತಾಲ್ಲೂಕಿನ ಕೆಸ್ತೂರಿನಲ್ಲಿ ಗುರುವಾರ ನಡೆದ ಬಿಜೆಪಿ, ಜೆಡಿಎಸ್ ಪಕ್ಷಗಳ ಸಮಾವೇಶದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರ ನಡುವೆ ಆತ್ಮೀಯತೆ ಇದೆ. ಈ ಹಾಲಿ ಹಾಗೂ ಮಾಜಿ ಪ್ರಧಾನಿಗಳ ಆಶೀರ್ವಾದ ಸೋಮಣ್ಣರಿಗೆ ಸಿಕ್ಕಿದೆ, ಎರಡೂ ಪಕ್ಷಗಳ ಕಾರ್ಯಕರ್ತರ ಬೆಂಬಲ ದೊರಕಿದೆ. ಇದರೊಂದಿಗೆ ಸೋಮಣ್ಣ ಚುನಾವಣೆಯಲ್ಲಿ ಜಯಗಳಿಸುತ್ತಾರೆ, ಸೋಮಣ್ಣ ಎಂದರೆ ಅಭಿವೃದ್ಧಿ, ಅಭಿವೃದ್ಧಿ ಎಂದರೆ ಸೋಮಣ್ಣ ಎಂದು ಹೇಳಿದರು.
ತಾವು ಮುಖ್ಯಮಂತ್ರಿಯಾಗಿದ್ದಾಗ ಹೆಣ್ಣುಮಕ್ಕಳಿಗೆ ಭಾಗ್ಯಲಕ್ಷಿö್ಮ ಯೋಜನೆ ನೀಡುತ್ತಿದ್ದೆ, ಹೈನುಗಾರಿಕೆ ಮಾಡುವವರಿಗೆ ಪ್ರೋತ್ಸಾಹಧನ ಕೊಡುತ್ತಿದ್ದೆವು, ಪ್ರಧಾನ ಮಂತ್ರಿಗಳ ಕಿಸಾನ್ ಸಮ್ಮಾನ್ ಯೋಜನೆಯ ಆರು ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದಿಂದ ನಾಲ್ಕು ಸಾವಿರ ರೂ.ಕೊಡುತ್ತಿದ್ದೆವು. ಈಗಿನ ಕಾಂಗ್ರೆಸ್ ಸರ್ಕಾರ ಈ ಎಲ್ಲಾ ಯೋಜನೆಗಳನ್ನು ಸ್ಥಗಿತಗೊಳಿಸಿ ಜನರಿಗೆ ಅನ್ಯಾಯ ಮಾಡಿದೆ ಎಂದು ಯಡಿಯೂರಪ್ಪ ಹೇಳಿದರು.
ಕ್ಷೇತ್ರದ ಬಿಜೆಪಿ, ಜೆಡಿಎಸ್ ಕರ್ಯರ್ತರ ಉತ್ಸಾಹ ಕಂಡು ಹುಮ್ಮಸ್ಸು ಬಂದಿದೆ

Leave a comment
Leave a comment