ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಸರಣಿ ಅತ್ಯಾಚಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ವಹಿಸಲು ಮನವಿ
ತುಮಕೂರು : ರಾಜ್ಯದಲ್ಲಿ ಇತ್ತೀಚೆಗೆ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಂದು ತುಮಕೂರು ಜಿಲ್ಲಾ ಅಂಬೇಡ್ಕರ್ ಸೇನೆ ಮಹಿಳಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಮನವಿ ಪತ್ರವನ್ನು ಸಲ್ಲಿಸಿದ ನಂತರ ಮಾತನಾಡಿದ ಅಂಬೇಡ್ಕರ್ ಸೇನೆಯ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಕೆ.ಸುಮಾ ರಾಜ್ಯದಲ್ಲಿ ಇತ್ತೀಚೆಗೆ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ, ಅದರಲ್ಲೂ ಕಳೆದ ವಾರ ತುಮಕೂರು ಜಿಲ್ಲೆಯ ಹೆಮ್ಮೆಯ ಪ್ರತೀಕ ಶ್ರೀ ಸಿದ್ಧಗಂಗಾ ಕ್ಷೇತ್ರದಲ್ಲಿ ಅದೂವ ಸಿದ್ಧಗಂಗಾ ಜಾತ್ರೆಗೆ ಬಂದಿದ್ದ ಅಲ್ಪಸಂಖ್ಯಾತ ಹೆಣ್ಣು ಮಗಳೊಬ್ಬಳೆ ಮೇಲೆ ಗ್ಯಾಂಗ್ ರೇಪ್ ಮಾಡಿದ್ದು ಶೋಚನೀಯ ಸಂಗತಿಯಾಗಿದೆ, ಈ ಪ್ರಕರಣ ನಡೆದಿರುವುದು ಗೃಹ ಸಚಿವರ ತವರಿನಲ್ಲಿಯೇ ಎಂಬುದು ಸಹ ಗಮನಾರ್ಹ ಸಂಗತಿಯಾಗಿದೆ ಎಂದರು.
ಮುoದುವರೆದು ಮಾತನಾಡುತ್ತಾ ಈ ರೀತಿಯಾದ ಘಟನೆಗಳು ನಡೆಯುತ್ತಿರುವುದಕ್ಕೆ ಮೂಲ ಕಾರಣ ಪೊಲೀಸ್ ಇಲಾಖೆ ಸಂಪೂರ್ಣ ವೈಪಲ್ಯವೆಂದರೇ ತಪ್ಪಾಗಲಾರದು, ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆಯು ಈ ಕುರಿತು ಗಮನಹರಿಸಿ, ತಪ್ಪಿತಸ್ಥರಿಗೆ ಕಾನೂನು ರೀತ್ಯ ಕಠಿಣ ಕ್ರಮ ಜರುಗಿಸುವುದಲ್ಲದೇ, ಇವರುಗಳನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸುತ್ತಿದ್ದೇವೆ, ಇಲ್ಲವಾದಲ್ಲಿ ದಲಿತಪರ ಸಂಘಟನೆಗಳ ಮೂಲಕ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ಜಿಲ್ಲಾಧ್ಯಕ್ಷರು ಕೆ.ಸುಮಾ, ಸಿ.ಪಿ.ಶೋಭಾ, ಆಶಾ, ರಾಧ, ಮಂಜಮ್ಮ, ಪದ್ಮ, ಲಕ್ಷ್ಮಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.