ತುಮಕೂರು:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಅಳವಡಿಸಿರುವ ಸ್ಮಾರ್ಟ್ ಡಿಸಪ್ಲೆ ಬೋರ್ಡುಗಳಲ್ಲಿ ಅಂಬೇಡ್ಕರ್ ಜೀವನ ಚರಿತ್ರೆ ಮತ್ತು ಅವರ ಸಾಧನೆಗಳ ಕಿರುಚಿತ್ರ ಪ್ರಸಾರ ಮಾಡುವಂತೆ ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿವತಿಯಿಂದ ನಗರಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿಕುಮಾರ್, ಉಪಾಧ್ಯಕ್ಷ ಡಿ.ಕೆ.ಇಂದ್ರಕುಮಾರ್ ನೇತೃತ್ವದಲ್ಲಿ ಸಮಿತಿಯ ಹಲವು ಸದಸ್ಯರು ನಗರಪಾಲಿಕೆ ಆಯುಕ್ತರಾದ ಅಶ್ವಿಜ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿಕುಮಾರ್, ಜಾತಿಯತೆಯ ನೋವುಂಡು ವಿವಿಧೆತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತಕ್ಕೆ ಸರಿ ಹೊಂದುವoತಹ ಸಂವಿಧಾನ ವನ್ನು ರಚಿಸಿಕೊಟ್ಟು, ದೇಶದ ಜನತೆ ಸಮಾನತೆ, ಸ್ವಾತಂತ್ರ ಮತ್ತು ಭಾತೃತ್ವದಿಂದ ಬದುಕುವಂತಹ ವಾತಾವರಣ ಕಲ್ಪಿಸಿದ ಮಹಾನ್ ಪುರುಷ ಡಾ.ಬಿ.ಆರ್.ಅಂಬೇಡ್ಕರ್. ಹಾಗಾಗಿ ಜನಸಾಮಾನ್ಯರಿಗೆ, ಅದರಲ್ಲಿಯೂ ವಿದ್ಯಾವಂತ ಯುವಜನತೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ,ಸಾಧನೆ ಮತ್ತು ತತ್ವಾದರ್ಶಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಪಾಲಿಕೆವತಿಯಿಂದ ವಿವಿಧ ವೃತ್ತಗಳಲ್ಲಿ ಅಳವಡಿಸಿರುವ ಸ್ಮಾರ್ಟ ಡಿಸ್ಪ್ಲೆ ಬೋರ್ಡುಗಳಲ್ಲಿ ಪ್ರಸರಿಸುವ ಮೂಲಕ ಸಂವಿಧಾನಶಿಲ್ಪಿಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಪಾಲಿಕೆಯ ಆಡಳಿತ ಸ್ಪಂದಿಸಲಿದೆ ಎಂಬ ವಿಶ್ವಾಸ ನಮಗಿದೆ ಎಂದರು.
ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾ ಉಪಾಧ್ಯಕ್ಷ ಡಿ.ಕೆ.ಇಂದ್ರಕುಮಾರ್ ಮಾತನಾಡಿ,ಅಂಬೇಡ್ಕರ್ ಜಯಂತಿ ಹೆಸರಿನಲ್ಲಿ ಅವರ ಪೋಟೋಗೆ ಹೂವು ಹಾಕಿ, ಪೂಜೆ ಮಾಡುವುದರಿಂದ ಯಾವುದೇ ಪ್ರಯೋಜನವಾಗದು, ಅವರ ಆಶಯಗಳನ್ನು ಜನರು,ಅದರಲ್ಲಿಯೂ ಶೋಷಿತ ಸಮುದಾಯಗಳ ಯುವಕರು ಅರ್ಥ ಮಾಡಿಕೊಂಡು, ಮುನ್ನೆಡೆಯುವಂತಾಗಬೇಕು ಎಂದರು.
ಈ ವೇಳೆ ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಕಾರ್ಮಿಕ ಘಟಕದ ಅಧ್ಯಕ್ಷ ಎಸ್.ನಾರಾಯಣ್,ತುಮಕೂರು ನಗರ ಗೌರವಾಧ್ಯಕ್ಷ ಮಹೇಶ್, ಟೈಲರ್ ಜಗದೀಶ್, ಇಮ್ರಾನ್, ಸೈಯದ್, ಸೈಯುಬ್ ಸೇರಿದಂತೆ ಹಲವರು ಜೊತೆಗಿದ್ದರು.
ಸ್ಮಾರ್ಟ್ ಡಿಸಪ್ಲೆ ಬೋರ್ಡುಗಳಲ್ಲಿ ಅಂಬೇಡ್ಕರ್ ಜೀವನ ಚರಿತ್ರೆ ಮತ್ತು ಅವರ ಸಾಧನೆಗಳ ಕಿರುಚಿತ್ರ ಪ್ರಸಾರ

Leave a comment
Leave a comment