ತುಮಕೂರು- ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ೧೩೫ ಸ್ಥಾನಗಳ ಸ್ಪಷ್ಟ ಬಹುಮತ ಬರಲು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರ ಪರಿಶ್ರಮ ಬಹಳ ದೊಡ್ಡದಿದೆ. ಅದರಲ್ಲೂ ಸಿದ್ದರಾಮಯ್ಯನವರು ಪರಿಶ್ರಮ ಜಾಸ್ತಿಯಿದ್ದು, ಈ ಬಾರಿ ಸಿದ್ದರಾಮಯ್ಯವರನ್ನೇ ಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಬೇಕು ಎಂದು ನಗರದಲ್ಲಿ ಕುರುಬರ ಸಂಘಟನೆಗಳ ಮುಖಂಡರು ಕಾಂಗ್ರೆಸ್ ಹೈಕಮಾಂಡ್ನ್ನು ಒತ್ತಾಯಿಸಿದ್ದಾರೆ.
ನಗರದ ಬಿ.ಹೆಚ್. ರಸ್ತೆಯಲ್ಲಿರುವ ಶ್ರೀ ಕಾಳಿದಾಸ ವಿದ್ಯಾವರ್ಧಕ ಸಂಘದ ಕಚೇರಿ ಮುಂಭಾಗ ಜಮಾಯಿಸಿದ ಶ್ರೀ ಕಾಳಿದಾಸ ವಿದ್ಯಾವರ್ಧಕ ಸಂಘ, ಜಿಲ್ಲಾ ಕುರುಬರ ಸಂಘ, ಸಂಗೊಳ್ಳಿ ರಾಯಣ್ಣನ ಸಂಘ, ಕನಕ ಪತ್ತಿನ ಸಹಕಾರ ಸಂಘ, ಕನಕ ಪತ್ತಿನ ಮಹಿಳಾ ಸಹಕಾರ ಸಂಘ, ಕವಿರತ್ನ ಕಾಳಿದಾಸ ಸಂಘ ಸೇರಿದಂತೆ ವಿವಿಧ ಕುರುಬರ ಸಂಘಟನೆಗಳ ಅಧ್ಯಕ್ಷರು, ಪದಾದಿಕಾರಿಗಳು ಹಾಗೂ ಮುಖಂಡರು ಈ ಬಾರಿ ಸಿದ್ದರಾಮಯ್ಯನವರನ್ನೇ ಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೊಂದರೆಯಾಗಲಿದೆ ಎಂಬ ಎಚ್ಚರಿಕೆಯನ್ನು ನೀಡಿದರು.
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರ ಪರಿಶ್ರಮ ಬಹಳ ದೊಡ್ಡದಿದೆ

Leave a comment
Leave a comment