ತುಮಕೂರು:ಪಕ್ಷದ ಹೈಕಮಾಂಡ್ ತುಮಕೂರು ಲೋಕಸಭಾ ಚುನಾವಣೆಯ ಟಿಕೇಟ್ ನನಗೆ ನೀಡಿದ ಹಿನ್ನೆಲೆಯಲ್ಲಿ,ಪ್ರಬಲ ಆಕಾಂಕ್ಷಿ ಯಾಗಿದ್ದರೂ,ನೋವನ್ನು ಮರೆತು ಬಿಜೆಪಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಸಹಕಾರ ನೀಡುತ್ತಿರುವ ಎಸ್.ಪಿ.ಚಿದಾನಂದ ಅವರಿಗೆ ಪಕ್ಷ ಚುನಾವಣೆಯ ನಂತರದಲ್ಲಿ ಒಳ್ಳೆಯ ಹುದ್ದೆಯನ್ನು ನೀಡಲಿದೆ ಎಂಬ ನಂಬಿಕೆ ನಮಗಿದೆ ಎಂದು ವಿ.ಸೋಮಣ್ಣ ತಿಳಿಸಿದ್ದಾರೆ.
ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿದ್ದ ಸಮಾಜ ಸೇವಕ ಎಸ್.ಪಿ.ಚಿದಾನಂದ ಮನಗೆ ಭೇಟಿ ನೀಡಿ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಶಾಸಕರಾದ ಜಿ.ಬಿ.ಜೋತಿಗಣೇಶ್ ಅವರೊಂದಿಗೆ ಸೇರಿ ಪಕ್ಷವನ್ನು ಸದೃಢವಾಗಿ ಕಟ್ಟಿದ್ದಾರೆ. ಅವರಿಗೆ ಲೋಕಸಭೆಯ ಟಿಕೇಟ್ ದೊರೆಯಬೇಕಾಗಿತ್ತು.ಕೊನೆಯ ಕ್ಷಣದ ಬದಲಾವಣೆ ಮತ್ತು ಮತ್ತೆ ನರೇಂದ್ರಮೋದಿ ಪ್ರಧಾನಿಯಾಗಬೇಕೆಂಬ ಮಹತ್ವದ ಉದ್ದೇಶದಿಂದ ನನಗೆ ಟಿಕೇಟ್ ನೀಡಿದ್ದಾರೆ.ಚಿದಾನಂದ ಅವರು ಸಹ ತಮ್ಮ ನೋವನ್ನು ಪಕ್ಷದ ವರಿಷ್ಠರು ಮತ್ತು ನಮ್ಮ ಮುಂದೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದು, ಮುಂದಿನ ದಿನಗಳಲ್ಲಿ ಉಜ್ವಲ ಭವಿಷ್ಯ ಅವರಿಗೆ ಕಾದಿದೆ ಎಂದರು.
ಇoದು ನೋವಿನ ನಡುವೆಯೂ ಎಸ್.ಪಿ.ಚಿದಾನಂದ ನಮ್ಮೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತಿದ್ದಾರೆ. ಒಂದುಕಡೆ ಶಾಸಕ ಜಿ.ಬಿ.ಜೋತಿಗಣೇಶ್, ಮತ್ತೊಂದು ಕಡೆ ಎಸ್.ಪಿ. ಚಿದಾನಂದ ಸರಿಸಮನಾಗಿ ಪಕ್ಷದ ಗೆಲುವಿಗೆ ದುಡಿಯಲು ಮುಂದಾಗಿದ್ದಾರೆ.ಅವರ ನಿಷ್ಕಲ್ಮಷ ಪ್ರೀತಿ ಮತ್ತು ಹೃದಯವೈಶಾಲತೆಗೆ ಧಕ್ಕೆಯಾಗದ ರೀತಿ ನಡೆಸಿಕೊಳ್ಳುತ್ತೇನೆ ಎಂಬ ಮಾತನ್ನು ಪಕ್ಷದ ವರಿಷ್ಠರು ಮತ್ತು ಅವರಿಗೆ ನೀಡಿದ್ದೇನೆ. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪಕ್ಷದ ಹಿಂದುಳಿದ ವರ್ಗಗಳ ನಾಯಕರಾಗಿ ಬೆಳೆಯಲಿದ್ದಾರೆ ಎಂಬ ವಿಶ್ವಾಸವನ್ನು ವಿ.ಸೋಮಣ್ಣ ವ್ಯಕ್ತಪಡಿಸಿದರು.
ಎಸ್.ಪಿ. ಚಿದಾನಂದ ಸರಿಸಮನಾಗಿ ಪಕ್ಷದ ಗೆಲುವಿಗೆ ದುಡಿಯಲು ಮುಂದಾಗಿದ್ದಾರೆ

Leave a comment
Leave a comment