ಅರಳೀಕಟ್ಟೆ ಚಾರಿಟಬಲ್ ಟ್ರಸ್ಟ್ನಿಂದ ಶ್ರೀರಾಮೋತ್ಸವ
ತುಮಕೂರು- ನಗರದ ತಾಲ್ಲೂಕು ಪಂಚಾಯ್ತಿ ಮುಂಭಾಗದಲ್ಲಿರುವ ಅರಳೀಕಟ್ಟೆ ಬಳಿ ಶ್ರೀರಾಮನವಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಅರಳೀಕಟ್ಟೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಕಳೆದ ೨೫ ವರ್ಷಗಳಿಂದ ಶ್ರೀರಾಮನವಮಿಯನ್ನು ಆಚರಿಸುತ್ತಾ ಬಂದಿದ್ದು, ಅದರಂತೆ ಶ್ರೀರಾಮೋತ್ಸವವನ್ನು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊoದಿಗೆ ಆಚರಿಸಲಾಯಿತು.
ಅರಳೀಕಟ್ಟೆ ಚಾರಿಟಬಲ್ ಟ್ರಸ್ಟ್ನ ಪದಾಧಿಕಾರಿಗಳು ಬೆಳಿಗ್ಗೆಯಿಂದಲೇ ಶ್ರೀರಾಮ ದೇವರಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ನೆರವೇರಿಸಿದರು.
ನಂತರ ತಾಲ್ಲೂಕು ಪಂಚಾಯ್ತಿ ಮುಂಭಾಗದ ಅರಳೀಕಟ್ಟೆಯಲ್ಲಿ ಭಕ್ತಾದಿಗಳಿಗೆ ಪಾನಕ, ಮಜ್ಜಿಗೆ, ಹೆಸರುಬೇಳೆ ವಿತರಿಸುವ ಮೂಲಕ ಶ್ರೀರಾಮನಾಮ ಸ್ಮರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಡಿ. ಕುಮಾರ್ ಅವರು, ಕಳೆದ ೨೫ ವರ್ಷಗಳಿಂದ ಅರಳೀಕಟ್ಟೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಶ್ರೀರಾಮೋತ್ಸವವನ್ನು ಆಚರಿಸುತ್ತಾ ಬಂದಿದ್ದೇವೆ. ಪ್ರತಿ ವರ್ಷವೂ ಶ್ರೀರಾಮನವಮಿಯಂದು ಭಕ್ತಾದಿಗಳಿಗೆ ಪಾನಕ, ಮಜ್ಜಿಗೆ, ಹೆಸರುಬೇಳೆ ಹಂಚುವ ಮೂಲಕ ಭಕ್ತಿ ಸಮರ್ಪಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಟ್ರಸ್ಟ್ನ ಪದಾಧಿಕಾರಿಗಳಾದ ರಾಜಣ್ಣ, ಆಟೋ ಅಯ್ಯ, ತಮ್ಮಣ್ಣ, ಶ್ರೀನಿವಾಸ್, ರಾಘು ಪ್ರಸಾದ್, ನರಸಿಂಹಮೂರ್ತಿ, ವರ್ತಿಕಟ್ಟೆ ರಮೇಶ್, ರಾಜು, ವಿರೂಪಾಕ್ಷಯ್ಯ ಮತ್ತಿತರರು ಪಾಲ್ಗೊಂಡಿದ್ದರು.
TUMKUR ಅರಳೀಕಟ್ಟೆ ಚಾರಿಟಬಲ್ ಟ್ರಸ್ಟ್ನಿಂದ ಶ್ರೀರಾಮೋತ್ಸವ

Leave a comment
Leave a comment