ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ ವಾರ್ತಾ ಇಲಾಖೆ ಮಳಿಗೆ ಬಗ್ಗೆ ಸ್ವಾಮೀಜಿ ಮೆಚ್ಚುಗೆ
ತುಮಕೂರು (ಕ.ವಾ.)ಫೆ. 27ಃ ಶ್ರೀ ಸಿದ್ದಗಂಗಾ ಮಠದಲ್ಲಿ ಜರುಗುತ್ತಿರುವ ಇತಿಹಾಸ ಪ್ರಸಿದ್ಧ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದ ಅಂಗವಾಗಿ ತೆರದಿರುವ ವಾರ್ತಾ ಇಲಾಖೆ ಮಳಿಗೆ ಬಗ್ಗೆ ಶ್ರೀ ಮಠದ ಶ್ರೀ ಶ್ರೀ ಸಿದ್ದಲಿಂಗಮಹಾಸ್ವಾಮಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಸೋಮವಾರ ಸಂಜೆ ವಸ್ತುಪ್ರದರ್ಶನದ ಉದ್ಘಾಟನೆ ನಂತರ ವಾರ್ತಾ ಇಲಾಖೆ ಮಳಿಗೆಗೆ ಭೇಟಿ ನೀಡಿ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯು ವಾರ್ತಾ ಇಲಾಖೆ ತೆರದಿರುವ ಮಳಿಗೆಯಲ್ಲಿ ಲಭ್ಯವಿದ್ದು ರೈತರು, ಸಾರ್ವಜನಿಕರು, ವಿದ್ಯಾರ್ಥಿಗಳು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಜಿ. ಪ್ರಭು ಮಾತನಾಡಿ ತುಮಕೂರು ಜಿಲ್ಲೆ ಅಭಿವೃದ್ಧಿ ಮಾಹಿತಿ, ಸರ್ಕಾರದ ಗೃಹಲಕ್ಷಿö್ಮ, ಶಕ್ತಿ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಸೇರಿದಂತೆ 5 ಗ್ಯಾರಂಟಿ ಯೋಜನೆಗಳು ಹಾಗೂ ಕನ್ನಡ ನಾಮಫಲಕಕ್ಕೆ ಒತ್ತು, ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕಾಗಿ ಜನಸ್ಪಂದನ, ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿಸಲು ಕೃಷಿ-ಖುಷಿ, ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ, ಇಂದಿರಾ ಕ್ಯಾಂಟೀನ್ ಮರುಪ್ರಾರಂಭ, ಕ್ಷೀರಭಾಗ್ಯಕ್ಕೆ ಹತ್ತರ ಸಂಭ್ರಮ, ಅತಿಥಿ ಉಪನ್ಯಾಸಕರಿಗೆ ಗೌರವ, ಬ್ರ್ಯಾಂಡ್ ಬೆಂಗಳೂರು, ನಮ್ಮ ಹಕ್ಕುಗಳ ಜನನಿ ನಮ್ಮ ಸಂವಿಧಾನ ಸೇರಿದಂತೆ ಸರ್ಕಾರದ ವಿವಿಧ ಮಹತ್ತರ ಯೋಜನೆ/ಕಾರ್ಯಕ್ರಮಗಳ ಮಾಹಿತಿ ಕಣಜವೇ ಮಳಿಗೆಯಲ್ಲಿ ಲಭ್ಯವಿದ್ದು, ಸಾರ್ವಜನಿಕರು ಮಳಿಗೆಗೆ ಭೇಟಿ ನೀಡಿ ಪ್ರಯೋಜನ ಪಡೆಯಬೇಕೆಂದು ಮನವಿ