ತುಮಕೂರು: ಅತ್ಯಂತ ಹಿಂದುಳಿದಿರುವ ಉಪ್ಪಾರ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸಿ, ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಲು ನೆರವಾಗಬೇಕು ಎಂದು ಹೊಸದುರ್ಗ ಭಗೀರಥ ಪೀಠದ ಅಧ್ಯಕ್ಷರಾದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಒತ್ತಾಯಿಸಿದರು. ಈ ಸಂಬAಧ ಫೆಬ್ರವರಿ ೨೯ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಉಪ್ಪಾರ ಸಮುದಾಯದ ರಾಷ್ಟಿçÃಯ ಸಮಾವೇಶ ಏರ್ಪಡಿಸಿಲಾಗಿದ್ದು, ಶಕ್ತಿ ಪ್ರದರ್ಶನದ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುವುದಾಗಿ ಹೇಳಿದರು.
ಭಗೀರಥ ಭಾರತ ಉಪ್ಪಾರ ಜನಕಲ್ಯಾಣ ರಥಯಾತ್ರೆ ಬುಧವಾರ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಸಮಾಜದ ಮುಖಂಡರು ಜನಕಲ್ಯಾಣ ರಥಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಿ ಬರಮಾಡಿಕೊಂಡರು. ನಂತರ ಅಮಾನಿಕೆರೆ ರಸ್ತೆಯ ಉಪ್ಪಾರ ವಿದ್ಯಾಭಿವೃದ್ಧಿ ಸಂಘದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಗಂಗೆ ಹಾಗೂ ಉಪ್ಪನ್ನು ಸಮಾಜಕ್ಕೆ ಕೊಟ್ಟ ಉಪ್ಪಾರ ಸಮಾಜ ಇಂದು ಸಂಕಷ್ಟದಲ್ಲಿದೆ. ಕುಲಕಸುಬು ಮಾಡಲು ಸಾಧ್ಯವಾಗದೆ, ಆರ್ಥಿಕವಾಗಿ ಕಷ್ಟದಲ್ಲಿದ್ದಾರೆ. ಸಮುದಾಯದ ಸಮಸ್ಯೆಗಳ ನಿವಾರಣೆಯಾಗಿ ಸರ್ಕಾರ ಅಗತ್ಯ ನೆರವು ನೀಡಿ ಸಮುದಾಯವನ್ನು ಮುಖ್ಯವಾಹಿನಿಗೆ ತರಬೇಕು. ಇದಕ್ಕಾಗಿ ಸರ್ಕಾರ ಉಪ್ಪಾರರಿಗೆ ಮೀಸಲಾತಿ ಪ್ರಮಾಣ ಹೆಚ್ಚು ಮಾಡಬೇಕು. ಇದರಿಂದ ಸಮುದಾಯದಲ್ಲಿ ಶಿಕ್ಷಣ ಸೌಲಭ್ಯ, ರಾಜಕೀಯ, ಸಾಮಾಜಿಕ ಸ್ಥಾನಮಾನ ದೊರೆಯಬೇಕು ಎಂದು ಹೇಳಿದರು.
