ತುಮಕೂರು- ಭರಣಿ ಮಳೆ ಹುಯ್ದರೆ ಧರಣಿಯೆಲ್ಲಾ ಆರಂಭ ಎಂಬ ಗಾದೆ ಮಾತಿದೆ. ಹಾಗಾಗಿ ಧರಣಿ ಮಳೆಗಾಗಿ ರೈತ ಸಮೂಹ ಆಗಸದತ್ತ ಮುಖಮಾಡಿ ಕುಳಿತಿದ್ದ ಸಂದರ್ಭದಲ್ಲಿ ರಾತ್ರಿಯಿಡೀ ಧಾರಾಕಾರ ವರ್ಷಧಾರೆಯಿಂದ ಹಳ್ಳಿಗಳಲ್ಲಿ ತೋಟಗಳು, ಕೃಷಿ ಭೂಮಿಗಳು ನೀರು ತುಂಬಿದ್ದರೆ, ನಗರ ಪ್ರದೇಶಗಳಲ್ಲಿನ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ಕಳೆದ ವರ್ಷ ನಿಗದಿಗಿಂತ ಹೆಚ್ಚು ಮಳೆ ಸುರಿದ ರೀತಿಯಲ್ಲೆ ರಾತ್ರಿಯೂ ವರ್ಷಧಾರೆ ಸುರಿದಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಆದರೆ ನಗರ ಪ್ರದೇಶದ ಕೆಲ ತಗ್ಗು ಪ್ರದೇಶಗಳು ಜಲಾವೃತಗೊಂಡಿರುವುದರಿAದ ಆ ಭಾಗದ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕಳೆದ ೩-೪ ತಿಂಗಳಿAದ ವರ್ಷಧಾರೆ ಇಲ್ಲದೆ ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನಸಾಮಾನ್ಯರಿಗೆ ರಾತ್ರಿ ೧೧ ಗಂಟೆಗೆ ಆರಂಭವಾದ ಮಳೆ ಮಧ್ಯರಾತ್ರಿ ೨ ಗಂಟೆವರೆಗೂ ಧಾರಾಕಾರವಾಗಿ ಸುರಿದಿದ್ದು, ನಂತರ ಮುಂಜಾನೆ ವರೆಗೂ ತುಂತುರು ಮಳೆಯಾಯಿತು.

ಇಡೀ ರಾತ್ರಿ ವರ್ಷಧಾರೆ ಸುರಿದಿದ್ದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ತಾಕುಗಳು, ಅಡಿಕೆ, ತೆಂಗಿನ ತೋಟಗಳು ಜಲಾವೃತಗೊಂಡರೂ ಸಹ ಬೇಸಿಗೆಯ ಬಿಸಿಲಿನ ಝಳದಿಂದ ತತ್ತರಿಸಿದ್ದ ತೋಟಗಳು ಮಳೆಯಿಂದಾಗಿ ನಳನಳಿಸುತ್ತಿವೆ.
ರಾತ್ರಿ ಧಾರಾಕಾರವಾಗಿ ಭರಣಿ ಮಳೆ ಕೃಷಿ ಚಟುವಟಿಕೆಗಳನ್ನು ಆರಂಭಿಸಲು ಶುಭ ಸೂಚನೆಯಾಗಿದೆ ಎಂಬುದು ರೈತರ ಸಂತಸದ ಮಾತು.