ತುಮಕೂರಿನಲ್ಲಿ ಇದೇ ಪ್ರಥಮ ಬಾರಿಗೆ ನಡೆದ ಎರಡು ದಿನಗಳ ಸಿಪಿಐ ರಾಜ್ಯಮಂಡಳಿ ಸಭೆಯಲ್ಲಿ ಫೆ.3-4 ರಂದು ಹೈದ್ರಾಬಾದಿನಲ್ಲಿ ನಡೆದ ರಾಷ್ಟ್ರೀಯ ಮಂಡಳಿ ಸಭೆಯ ತೀರ್ಮಾನದಂತೆ ಕರ್ನಾಟಕದ ಎಲಾ ಜಿಲ್ಲಾ ಮುಖಂಡರುಗಳ ಅಭಿಪ್ರಾಯಗಳನ್ನು ಆಲಿಸಿ, ತುಮಕೂರು ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸಿಪಿಐ ಅಭ್ಯರ್ಥಿಯನ್ನು ಮುಂದಿನ ಲೋಕಸಭಾ ಚುನಾವಣಾ ಕಣಕ್ಕೆ ಇಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮಂಡಳಿಗೆ ವರದಿ ನೀಡಲಾಗಿದೆ ಎಂದು ರಾಜ್ಯ ಮಂಡಳಿ ಕಾರ್ಯದರ್ಶಿ ಸಾತಿ ಸುಂದರೇಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಹೈದ್ರಾಬಾದಿನಲ್ಲಿ ನಡೆದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಕರ್ನಾಟಕದಿಂದ ಸಿಪಿಐ ಸ್ಪರ್ಧೆ ಮಾಡಬಹುದಾದ ಲೋಕಸಭಾ ಕ್ಷೇತ್ರಗಳನ್ನು ಗುರುತಿಸಿ ಹೆಸರಿಸುವಂತೆ ಸೂಚನೆ ನೀಡಿದ್ದರು.ಆದರಂತೆ ರಾಜ್ಯದಲ್ಲಿ ಎಲ್ಲಾ ಜಿಲ್ಲಾ ಮುಖಂಡ ಅಭಿಪ್ರಾಯ ಸಂಗ್ರಹಿಸಿದ್ದು,ತುಮಕೂರು ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರಗಳನ್ನು ಆಯ್ಕೆ ಮಾಡಲಾಗಿದೆ.ಈ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದು ಬಿಡುವುದು ರಾಷ್ಟ್ರೀಯ ಮಂಡಳಿಗೆ ಬಿಟ್ಟ ತೀರ್ಮಾನ ಎಂದರು.
ಕಳೆದ 10 ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸದರೆ ಧಾರ್ಮಿಕ ಮತ್ತು ಭಾವನಾತ್ಮಕ ವಿಚಾರಗಳ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುತ್ತಿರುವ ಒಕ್ಕೂಟ ಸರಕಾರದ ಕ್ರಮವನ್ನು ಖಂಡಿಸಿ,ಬಿಜೆಪಿ ಸೊಲಿಸಿ, ದೇಶ ಉಳಿಸಿ ಎಂಬ ಆಂದೋಲವನ್ನು ಮಾರ್ಚ್ 03 ರಿಂದ ರಾಜ್ಯದಾಧ್ಯಂತ ಆಯೋಜಿಸಿದ್ದು, ರಾಜ್ಯದ ಮೈಸೂರು, ಕಲ್ಬುರ್ಗಿ, ಬಳ್ಳಾರಿ,ಮಂಗಳೂರು, ಹಾವೇರಿ ಮತ್ತು ದಾವಣಗೆರೆಯಲ್ಲಿ ಬೃಹತ್ ಕಾರ್ಮಿಕರು, ರೈತರ ಸಮಾವೇಶ ಆಯೋಜಿಸಲಾಗಿದೆ. ಮಾರ್ಚ್ 03ರಂದು ಮೊದಲ ಕಾರ್ಯಕ್ರಮದ ದಾವಣಗೆರೆಯಲ್ಲಿ ಆಯೋಜಿಸಲಾಗಿದೆ.ಈ ಆಂದೋಲನಕ್ಕೆ ಜಾತ್ಯಾತೀತ ಮನಸ್ಸುಗಳೆಲ್ಲವನ್ನು ಆಹ್ವಾನಿಸಲಾಗಿದೆ ಎಂದು ಸಾತಿ ಸುಂದರೇಶ್ ತಿಳಿಸಿದರು.
ಕೇಂದ್ರದಲ್ಲಿ ಮೊದಲ ಬಾರಿಗೆ ಅಂದರೆ 2014ರಲ್ಲಿ ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ, ಕಪ್ಪು ಧನ ವಾಪಸ್ ಸೇರಿದಂತೆ ಹಲವಾರು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಎನ್.ಡಿ.ಎ ಸರಕಾರ, ಐದು ವರ್ಷಗಳಲ್ಲಿ ಕೊಟ್ಟ ಭರವಸೆ ಈಡೇರಿಸಲಾಗಿದೆ. ಚುನಾವಣೆ ಹೊಸ್ತಿಲಿನಲ್ಲಿ ಪುಲ್ವಾಮ್ ಘಟನೆಯನ್ನು ಮುಂದಕ್ಕೆ ತಂದು ಜನರನ್ನು ಭಾವನಾತ್ಮಕವಾಗಿ ಕೆರಳಿಸಿ,ಅಧಿಕಾರ ಹಿಡಿಯಿತು.ಈಗ ಪೂರ್ಣವಾಗದ ಶ್ರೀರಾಮಮಂದಿರ ಉದ್ಘಾಟಿಸಿ, ಧಾರ್ಮಿಕವಾಗಿ ಜನರನ್ನು ದಾರಿ ತಪ್ಪಿಸಿ ಅಧಿಕಾರ ಗದ್ದುಗೆ ಏರಲು ಪ್ರಯತ್ನಿಸುತ್ತಿದೆ. ಹಾಗಾಗಿ ಜನರನ್ನು ಎಚ್ಚರಿಸಿ, ಜನರಿಗೆ ನಿಜವಾದ ಸಮಸ್ಯೆಗಳನ್ನು ತಿಳಿಸಿ ಹೇಳುವ ನಿಟ್ಟಿನಲ್ಲಿ ಬಿಜೆಪಿ ಸೊಲಿಸಿ, ದೇಶ ಉಳಿಸಿ ಎಂಬ ಆಂದೋಲನವನ್ನು ಸಿಪಿಐ ರಾಜ್ಯದಾಧ್ಯಂತ ಹಮ್ಮಿಕೊಂಡಿದೆ ಎಂದರು.
ಸಿಪಿಐ ರಾಷ್ಟ್ರೀಯ ಮಂಡಳಿ ಕಾರ್ಯದರ್ಶಿ ಪಿ.ವಿ.ಲೋಕೇಶ್ ಮಾತನಾಡಿ,ಚುನಾವಣೆ ಬಾಂಡ್ ಎಂಬುದು ಎಂತಹ ಘನಘೋರ ಬ್ರಷ್ಟಾಚಾರ ಎಂಬುದನ್ನು ಇತ್ತೀಚಿನ ಸುಪ್ರಿಂಕೋರ್ಟ ತೀರ್ಪು ಸ್ಪಷ್ಟಪಡಿಸಿದೆ.2009ರಲ್ಲಿ ಯುಪಿಎ2 ಸರಕಾರವಿದ್ದಾಗ ಇಂದಜಿತ್ ಗುಪ್ತ ಅವರ ಆಯೋಗ ಚುನಾವಣಾ ಪಡೆಯುವುದು ಬೇಡ ಎಂಬ ವರದಿಯನ್ನು ಚುನಾವಣಾ ಸುಧಾರಣಾ ವರದಿಯಲ್ಲಿ ನೀಡಿದ್ದರು.ಅದರ ಮುಂದುವರೆದ ಭಾಗ ಸುಪ್ರಿಂಕೋರ್ಟು ತೀರ್ಪು.ಚುನಾವಣಾ ಆಯೋಗ ನಿಗಧಿತ ಅವಧಿಯೊಳಗೆ ಚುನಾವಣಾ ಬಾಂಡ್ಗಳ ಬಗ್ಗೆ ಮಾಹಿತಿಯನ್ನು ತನ್ನ ವೆಬ್ಸೈಟ್ನಲ್ಲಿ ಹಾಕಿದರೆ ಜನತೆ ನಿಜವಾದ ಭ್ರಷ್ಟಾಚಾರಿ ಯಾರು ?, ದೇಶದ ಸಂಪತ್ತು ಯಾರ ಕೈಗೆ ಸೇರುತ್ತಿದೆ ಎಂಬ ಸ್ಪಷ್ಟ ಮಾಹಿತಿ ರವಾನೆಯಾಗಲಿದೆ ಎಂದರು.
ದೇಶದ ರಾಜಧಾನಿಯ ಗಡಿಯಲ್ಲಿ 2020ರಲ್ಲಿ ನಡೆದ ಆಹೋರಾತ್ರಿ ಧರಣಿಯ ರೀತಿಯಲ್ಲಿಯೇ ಇಂದು ಸಹ ಹೋರಾಟ ನಡೆಸುತ್ತಿದ್ದಾರೆ.ಇದೇ ರೀತಿ ಅಮೇರಿಕಾ, ಯೂರೋಪ್ ರಾಷ್ಟ್ರಗಳಲ್ಲಿಯೂ ಹೋರಾಟ ಆರಂಭವಾಗಿದೆ. ಕೃಷಿ ಬಿಕ್ಕಟ್ಟು ಇಂದು ಜಾಗತಿಕ ಸಮಸ್ಯೆಯಾಗಿ ಮಾರ್ಪಟ್ಟಿದೆ. ದೆಹಲಿಯ ರೈತರ ಹೋರಾಟ ಬೆಂಬಲಿಸಿ, ಕರ್ನಾಟಕದಲ್ಲಿಯೂ ಪ್ರತಿಭಟಗಳು ನಡೆದಿವೆ. ಮುಂದೆಯೂ ನಡೆಯುತ್ತಲಿರಲಿವೆ ಎಂದು ಪಿ.ವಿ.ಲೋಕೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಮಂಡಳಿ ಅಮ್ಜಾದ್ ಖಾನ್,ಕೆ.ಜೋತಿ,ಜಿಲ್ಲಾಧ್ಯಕ್ಷ ಗಿರೀಶ್,ಖಜಾಂಚಿ ಅಶ್ವಥನಾರಾಯಣ ಅವರುಗಳು ಉಪಸ್ಥಿತರಿದ್ದರು.
ತುಮಕೂರಿನಲ್ಲಿ ಇದೇ ಪ್ರಥಮ ಬಾರಿಗೆ ನಡೆದ ಎರಡು ದಿನಗಳ ಸಿಪಿಐ ರಾಜ್ಯಮಂಡಳಿ ಸಭೆ

Leave a comment
Leave a comment