ವಿದ್ಯಾರ್ಥಿ ನಿಲಯಕ್ಕೆ ತುಳಸಿ ಮದ್ದಿನೇನಿ ಭೇಟಿ
ತುಮಕೂರು(ಕ.ವಾ.)ಅ.೦೩: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದ ನಗರದ ಅಂತರಸನಹಳ್ಳಿಯಲ್ಲಿರುವ ಇಂಜಿನಿಯರಿAಗ್ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.
ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನಂತರ ಮಾತನಾಡಿದ ಅವರು, ನಿಲಯವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಎಲೆಕ್ಟಿçಕ್ ವೈರ್ಗಳು ಕೈಗೆಟಕದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ನಿಲಯದ ಮೇಲ್ಮಹಡಿ(ಟೆರಸ್) ಮೇಲೆ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅನುಕೂಲವಾಗುವಂತೆ ಛಾವಣಿ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರಲ್ಲದೆ, ಇದರಿಂದ ಕಟ್ಟಡ ಮಳೆ ನೀರಿನಿಂದಾಗಿ ಸೋರಿಕೆಯಾಗುವುದನ್ನು ತಡೆಗಟ್ಟಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗಂಗಪ್ಪ ಹಾಗೂ ತಾಲ್ಲೂಕು ಅಧಿಕಾರಿ ಗೀತಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಂತರ ಜಿಲ್ಲಾಸ್ಪತ್ರೆಯಲ್ಲಿರುವ ಟ್ರಾಮಾಕೇರ್ ಸೆಂಟರ್ಗೆ ಭೇಟಿ ನೀಡಿದ ಅವರು, ಉದ್ಘಾಟನೆಯಾಗಿದ್ದರೂ ರೋಗಿಗಳಿಗೆ ಈವರೆಗೂ ಸೇವೆ ಒದಗಿಸದೇ ಇರುವ ಬಗ್ಗೆ ಪ್ರಶ್ನಿಸಿದಾಗ ಜಿಲ್ಲಾ ಶಸ್ತç ಚಿಕಿತ್ಸಕಿ ಡಾ: ವೀಣಾ ಉತ್ತರಿಸಿ ಟ್ರಾಮಕೇರ್ ಸೆಂಟರ್ಗೆ ನೇಮಕ ಮಾಡಿಕೊಂಡಿರುವ ಮಾನವಸಂಪನ್ಮೂಲಕ್ಕೆ ತರಬೇತಿ ನೀಡಲಾಗುತ್ತಿದೆ ಹಾಗೂ ಅಪಘಾತ ಚಿಕಿತ್ಸಾ ಕೇಂದ್ರಕ್ಕೆ ಅಗತ್ಯವಿರುವ ಉಪಕರಣಗಳ ಸ್ಥಳಾಂತರ ಕಾರ್ಯ ನಡೆಯುತ್ತಿರುವುದರಿಂದ ಅಕ್ಟೋಬರ್ ೫ರ ಗುರುವಾರದಿಂದ ಸೇವೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ವಿದ್ಯಾರ್ಥಿ ನಿಲಯಕ್ಕೆ ತುಳಸಿ ಮದ್ದಿನೇನಿ ಭೇಟಿ

Leave a comment
Leave a comment