ತುಮಕೂರು:ಒಳಮೀಸಲಾತಿಗೆ ಸಂಬoಧಿಸಿದoತೆ ಏಂಪಾರಿಕಲ್ ಡೇಟಾ ಸಂಗ್ರಹಕ್ಕೆ ನ್ಯಾ.ನಾಗಮೋಹನ್ದಾಸ್ ಸಮಿತಿ ಶೀಘ್ರದಲ್ಲಿಯೇ ಸಮೀಕ್ಷೆ ಆರಂಭಿಸಲಿರುವ ಹಿನ್ನೆಲೆಯಲ್ಲಿ ಇಂದು ತುಮಕೂರು ನಗರದ ಅಂಬೇಡ್ಕರ್ ಭವನದಲ್ಲಿ ಮಾದಿಗ ಸಮುದಾಯದ ಮುಖಂಡರು ಸಭೆ ಸೇರಿ, ಸಮೀಕ್ಷೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಿದರು.
ನ್ಯಾ.ನಾಗಮೋಹನ್ ದಾಸ್ ಸಮಿತಿಯ ಮದ್ಯಂತರ ವರದಿಯ ಶಿಫಾರಸ್ಸಿನಂತೆ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಹೊಸದಾಗಿ ಎಂಪಾರಿಕಲ್ ಡೇಟಾ ಸಂಗ್ರಹಕ್ಕೆ ಎಲ್ಲಾ ಸಿದ್ದತೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಮೀಕ್ಷೆಯನ್ನು ಮಾದಿಗ ಸಮುದಾಯದ ಮುಖಂಡರು, ಹೋರಾಟಗಾರರು,ಯುವಜನರು ಸಕ್ರಿಯವಾಗಿ ಪಾಲ್ಗೊಂಡು, ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸುವ ಮೂಲಕ ಎಕೆ,ಎಡಿ,ಎಎ ಇರುವ ಕಲಂಗಳಲ್ಲಿ ಸಂಬoಧಪಟ್ಟ ಉಪಜಾತಿಯನ್ನು ಕಡ್ಡಾಯವಾಗಿ ನಮೂದಿಸುವ ಮೂಲಕ ಅಂತಿಮ ಹಂತದ ಹೋರಾಟವನ್ನು ಕೈಗೊಳ್ಳಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
TUMKUR ಮಾದಿಗ ಸಮುದಾಯದ ಮುಖಂಡರು ಸಭೆ

Leave a comment
Leave a comment