ತುಮಕೂರು:- ಮತ್ತೊಮ್ಮೆ ಮೂರನೇ ಭಾರಿ ಮೋದಿ ಪ್ರಧಾನಿಯಾಗಬೇಕು. ಹಾಗಾಗಿ ನನ್ನನ್ನ ಗೆಲ್ಲಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಮನವಿ ಮಾಡಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಎಸ್ಪಿ ಮೋರ್ಚಾ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನು ಬಸವಣ್ಣನವರ ಅನುಯಾಯಿಯಾಗಿ ಬೆಳೆದುಕೊಂಡು ಬಂದಿದ್ದೇನೆ. ಸಮಾನದ ಕಟ್ಟಕಡೆಯವರನ್ನೂ ಮುಖ್ಯವಾಹಿನಿಗೆ ತರಬೇಕು ಎನ್ನುವುದು ನನ್ನ ಉದ್ದೇಶ. ಆ ನಿಟ್ಟಿನಲ್ಲಿ ಕಾರ್ಯಕ್ರಮ ಮಾಡುತ್ತೇನೆ ಎಂದರು.
ದಲಿತ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ ಹಮ್ಮಿಕೊಳ್ಳುತ್ತೇನೆ. ಡಾ.ಬಿ.ಆರ್. ಅಂಬೇಡ್ಕರ್ ಅವರು ದೇಶದ ಸಂಪತ್ತು. ದೇಶಕ್ಕೆ ದೊಡ್ಡದಾದ ಸಂವಿಧಾನ ಕೊಟ್ಟಿದ್ದಾರೆ. ನರೇಂದ್ರ ಮೋದಿ ಅವರ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದೆ. ಸಮುದಾಯದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸಿದೆ. ಜನರ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದರು.
ನಾನು ಈಗಾಗಲೇ ಓಡಾಡಿದ್ದೇನೆ. ಮಧುಗಿರಿ, ಕೊರಟಗೆರೆ, ತುರುವೇಕೆರೆ, ಗುಬ್ಬಿ, ಚಿಕ್ಕನಾಯಕನಹಳ್ಳಿ, ತಿಪಟೂರು ಏನು ಅಂತಾ ಗೊತ್ತಾಗಿದೆ. ನನ್ನದೆ ಆದ ಸಂಸ್ಕಾರ ಬೆಳೆಸಿಕೊಂಡು ಬಂದಿದ್ದೇನೆ. ಇದು ಭಾರತ ದೇಶದ ಚುನಾವಣೆಯಾಗಿದೆ. ದೇಶದ ಗೆಲುವಿಗೆ ನನಗೆ ಮತ ನೀಡಬೇಕು. ನಾನು ಕಾರ್ಯಕ್ರಮಕ್ಕೆ ಬರುವಾಗ 15-16 ಕರೆಯಲ್ಲಿ ಮಾತಾಡಿಕೊಂಡು ಬಂದೆ. ಅದರಲ್ಲಿ ದಲಿತ ಮುಖಂಡರು ಮಾತಾಡಿದರು. ಸೋಮಣ್ಣನವರೇ ನಿಮ್ಮ ಕಾರ್ಯವೈಖರಿ ನಮಗೆ ಗೊತ್ತಿದೆ ಎಂದು ಮೆಚ್ಚುಗೆ ಮಾತುಗಳನ್ನಾಡಿದರು ಎಂದರು.
ಮತ್ತೊಮ್ಮೆ ಮೋದಿ ಪ್ರಧಾನಿಯಾಬೇಕು, ನನ್ನನ್ನ ಗೆಲ್ಲಿಸಬೇಕು: ವಿ.ಸೋಮಣ್ಣ

Leave a comment
Leave a comment