ತುಮಕೂರು, ಮೇ – ಮತದಾನ ಪ್ರಜಾಪ್ರಭುತ್ವದ ಹಕ್ಕು. ಹಾಗಾಗಿ ಪ್ರತಿಯೊಬ್ಬರೂ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಮನವಿ ಮಾಡಿದರು.
ನಗರದ ಸಿದ್ದಗಂಗಾ ಮಠದ ಆವರಣದಲ್ಲಿರುವ ಶ್ರೀ ಸಿದ್ದಲಿಂಗೇಶ್ವರ ಸನಿವಾಸ ಹಿರಿಯ ಪ್ರಾಥಮಿಕ ಪಾಠಶಾಲೆಯ ಮತಗಟ್ಟೆಗೆ ತೆರಳಿ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಭಾರತೀಯ ಪ್ರಜಾಪ್ರಭುತ್ವದಲ್ಲಿ ಮತದಾನಕ್ಕೆ ಬಹಳ ಮಹತ್ವವಿದೆ. ನಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವಂತ ವ್ಯವಸ್ಥೆ ಇದಾಗಿದ್ದು, ಸಂವಿಧಾನ ಕೊಟ್ಟಿರುವ ಹಕ್ಕನ್ನು ಪ್ರತಿಯೊಬ್ಬರೂ ಚಲಾವಣೆ ಮಾಡಬೇಕು ಎಂದರು.
ಮತದಾನ ಪ್ರಜಾಪ್ರಭುತ್ವದ ಹಕ್ಕು. ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ

Leave a comment
Leave a comment